ಉಡುಪಿ | ಮಹಿಳೆಯರನ್ನು ಮಾತೆ ಎಂದು ಸಂಭೋಧಿಸುವ ಬಿಜೆಪಿಗರ ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ

Date:

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿಪಕ್ಷ ಬಿಜೆಪಿಯ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ಕೂಡಲೇ ಬಂಧಿಸುವಂತೆ ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.

- Advertisement -

ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ರಾತ್ರಿಯಿಡೀ ರಾಜ್ಯ ಸರಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಬಿಜೆಪಿಯ ಎನ್.ರವಿಕುಮಾರ್ ರವರು ಹೇಳಿಕೆ ನೀಡಿರುವ ದ್ವಂದ್ವ ಮಾತುಗಳು ಆಶ್ಚರ್ಯ ಹಾಗೂ ಅಸಹನೀಯವಾಗಿದೆ. ಮಾತೆತ್ತಿದರೆ ಮಹಿಳೆಯರನ್ನು ಮಾತೆ, ತಾಯಿ ಎಂದು ಸಂಭೋಧಿಸುವ ಬಿಜೆಪಿಗರು ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮಹಿಳೆಯರನ್ನು ಕೆಟ್ಟ ದೃಷ್ಠಿಯಲ್ಲಿ ನೋಡುವುದರಲ್ಲಿ ಬಿಜೆಪಿಗರು ಬಲು ನಿಸ್ಸೀಮರು ಎನ್ನುವುದಕ್ಕೆ ಈ ಹಿಂದೆ ರಾಜ್ಯದಲ್ಲೇ ಬಿಜೆಪಿ ನಾಯಕರು ಮಹಿಳೆಯರ ಮೇಲೆ ದೌರ್ಜನ್ಯವೆಸಗಿರುವುದು ಹಲವಾರು ಸಾಕ್ಷಿಗಳು ಕಣ್ಣ ಮುಂದೆ ಇವೆ. ವಿಧಾನ ಪರಿಷತ್ತಿನ ವಿಪಕ್ಷ ಬಿಜೆಪಿಯ ಮುಖ್ಯ ಸಚೇತಕ ಎನ್.ರವಿಕುಮಾರ್ ಇತ್ತೀಚಿಗೆ ಕಲಬುರಗಿ ಜಿಲ್ಲಾಧಿಕಾರಿ ಕುರಿತು ವಿವಾದಿತ ಮಾತುಗಳನ್ನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದಲ್ಲದೆ ಮತ್ತೆ ಹೈಕೋರ್ಟ್ ಕೂಡ ಛೀಮಾರಿ ಹಾಕಿ ಜಿಲ್ಲಾಧಿಕಾರಿಯವರಲ್ಲಿ ಕ್ಷಮೆ ಕೇಳಲು ಹೇಳಿದ್ದು ಮತ್ತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧವೂ ಅವಹೇಳನಕಾರಿಯಾಗಿ ಮಾತನಾಡಿರುವುದು ಬಿಜೆಪಿಗರ ನಿಜ ಸಂಸ್ಕೃತಿ ಏನು ಎನ್ನುವುದನ್ನು ತೋರಿಸಿದೆ.

ರಾಜ್ಯದ ಉನ್ನತ ಸ್ಥಾನದಲ್ಲಿರುವ ಮಹಿಳೆಯನ್ನು ಇಂತಹ ಕೀಳು ಮಟ್ಟದಲ್ಲಿ ಮಾತನಾಡಿದರೂ ಕೂಡ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಆಗಲಿ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಆಗಲಿ ಯಾರೂ ಕೂಡ ರವಿಕುಮಾರ್ ವಿರುದ್ದ ಮಾತನಾಡುವ ಅಥವಾ ಅವರ ಮಾತನ್ನು ತಪ್ಪು ಎಂದು ಹೇಳುವ ಕನಿಷ್ಠ ಸೌಜನ್ಯ ಕೂಡ ಇಲ್ಲದಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಇಂತಹ ಅವಹೇಳನಕಾರಿಯಾಗಿ ಮಾತನಾಡಿರುವ ಎನ್ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ಅವರನ್ನು ಬಂಧಿಸುವಂತೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...