ಉಡುಪಿ | ಬೀದಿ ಪಾಲಾದ ಬಿಎಸ್ಸಿ ಪದವೀಧರ ಮಾನಸಿಕ ಅಸ್ವಸ್ಥನ ರಕ್ಷಣೆ; ಸೂಚನೆ

Date:

Advertisements

ಕಳೆದ ಒಂದೂವರೆ ವರ್ಷದಿಂದ ಉಡುಪಿ ನಗರದಲ್ಲಿ ಮನ ಬಂದಂತೆ ತಿರುಗಾಡುತ್ತಾ, ಕೂಗುತ್ತಾ ಕೆಲವೊಂದು ಬಾರಿ ಭಯದ ವಾತಾವರಣ ಸೃಷ್ಟಿಸಿ, ಕೊಳಕು ಬಟ್ಟೆ ಕ್ಷೌರ ಸ್ನಾನವನ್ನು ಮಾಡದೆ ಬೀದಿ ಪಾಲಾದ ಬಿಎಸ್ಸಿ ಪದವೀಧರ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ದೈಗೋಳಿ ಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ಸೇವಾಶ್ರಮ ಕ್ಕೆ ಚಿಕಿತ್ಸೆ ಹಾಗೂ ಪುನರ್ವಸತಿಗೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ.

ವ್ಯಕ್ತಿ ತನ್ನ ಹೆಸರು ಪ್ರಶಾಂತ್ ಸಾಲಿಯನ್ (40) ಮಲ್ಪೆ ಪಂದುಬೆಟ್ಟುವಿನ ಮೊಗವೀರ ಸಮಾಜದವರು ಎಂಬ ಮಾಹಿತಿ ನೀಡಿದ್ದಾರೆ. ಬಿಎಸ್ಸಿ ಪದವೀಧರರಾದ ಇವರು ಹಲವು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಿದ್ದು ಪ್ರತಿಭಾವಂತ ವ್ಯಕ್ತಿಯಾಗಿದ್ದಾರೆ. ಯಾವುದೋ ವಿಷಯಕ್ಕೆ ಮನನೊಂದು ಮಾನಸಿಕ ಅಸ್ವಸ್ತರಾಗಿ ಚಿಕಿತ್ಸೆ ಪಡೆಯದೆ ಬೀದಿ ಪಾಲಾಗಿ ಬದುಕು ನಡೆಸುತ್ತಿದ್ದು ಬಹಳಷ್ಟು ಸಾರ್ವಜನಿಕರು ಕೂಡ ಇವರ ಬಗ್ಗೆ ಅನುಕಂಪ ಹೊಂದಿದ್ದರು.

ಸಾರ್ವಜನಿಕರ ವಿನಂತಿಯ ಮೇರೆಗೆ ವಿಶು ಶೆಟ್ಟಿ ರಕ್ಷಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಶ್ರಮದ ಮುಖ್ಯಸ್ಥರಲ್ಲಿ ವಿಶು ಶೆಟ್ಟಿ ಮಾಡಿದ ಮನವಿಗೆ ಅನುಮತಿ ನೀಡಿದ್ದು ತನ್ನ ವಾಹನದಲ್ಲಿ ಆಶ್ರಮಕ್ಕೆ ದಾಖಲು ಮಾಡಿದ್ದಾರೆ ಮತ್ತು ಸಂಬಂಧಪಟ್ಟವರು ಹಾಗೂ ಅಧಿಕಾರಿಗಳು ಶ್ರೀ ಸಾಯಿ ಸೇವಾಶ್ರಮ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

Advertisements

ಈ ಬಗ್ಗೆ ನಗರ ಠಾಣೆಗೆ ಮಾಹಿತಿ ನೀಡಲಾಗಿದೆ. ರಕ್ಷಣಾ ಕಾರ್ಯದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಉದ್ಯಾವರದ ಹರೀಶ್ ರಾಮದಾಸ್ ಪಾಲನ್ ಹಾಗೂ ಸಂದೇಶ್ ಉಚ್ಚಿಲ್ ಸಹಕರಿಸಿದ್ದಾರೆ.

ಸಮಾಜದಲ್ಲಿ ಬಹಳಷ್ಟು ಮಾತೆಯರು ಮಕ್ಕಳ ಮಾನಸಿಕ ತೊಂದರೆಯಿಂದ ಅಸಹಾಯಕರಾಗಿ ಬದುಕಲಾರದ ಬದುಕಿನಲ್ಲಿ ಬದುಕುತ್ತಿದ್ದಾರೆ. ಅದರಲ್ಲಿ‌ಬಹಳಷ್ಟು ಜನ ಆರ್ಥಿಕವಾಗಿಯೂ ಕಷ್ಟದಲ್ಲಿದ್ದು , ಜನ ಬಲವೂ ಇಲ್ಲದೇ ಸಾವಿಗೆ ಶರಣಾಗುವ ಹಂತದಲ್ಲಿದ್ದಾರೆ. ಈ ಬಗ್ಗೆ ಹಲವು ಬಾರಿ ಸರಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ವಲ್ಪ ಯೋಚಿಸಿ ಎಂದು ಸಾಮಾಜ ಸೇವಕ ವಿಶು ಶೆಟ್ಟಿ ಹೇಳಿದ್ದಾರೆ‌

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X