ಉಡುಪಿ | ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ: ಇಬ್ಬರ ಬಂಧನ

Date:

Advertisements

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷವುಣಿಸಿದ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಅಜೆಕಾರು ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೀಡಾದವರನ್ನು ಬಾಲಕೃಷ್ಣ(44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಹಿರ್ಗಾನದ ದಿಲೀಪ್ ಬಂಧಿತ ಆರೋಪಿಗಳು.

ನಡೆದಿದ್ದೇನು?

Advertisements

ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಕಳ ರೋಟರಿ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್ಲಾಕ್, ಬೆಂಗಳೂರಿನ ನಿಮ್ಹಾನ್ಸ್, ವಿಕ್ಟೋರಿಯಾ ಹಾಗೂ ಮಂಗಳೂರಿನ ಬೇರೆ ಬೇರೆ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅ.20 ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದರು.

WhatsApp Image 2024 10 25 at 12.44.33 PM
ಪತಿ ಬಾಲಕೃಷ್ಣ ಜೊತೆಗೆ ಆರೋಪಿ ಪತ್ನಿ ಪ್ರತಿಮಾ

ಸಾವಿನ ಬಗ್ಗೆ ಪ್ರತಿಮಾಳ ಸಹೋದರ ಸಂದೀಪ್ ಸಂಶಯ ವ್ಯಕ್ತಪಡಿಸಿದ್ದರು. ಆ ಬಳಿಕ ಮೃತಪಟ್ಟ ಬಾಲಕೃಷ್ಣ ಅವರ ಅಣ್ಣ ರಾಮಕೃಷ್ಣ (42) ಅವರಿಗೆ ಮಾಹಿತಿ ನೀಡಿ, ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಇದನ್ನು ಓದಿದ್ದೀರಾ? ಕೊಪ್ಪಳ | ಮರಕುಂಬಿ ಪ್ರಕರಣ; ಜೀವಾವಧಿ ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಓರ್ವ ಅಪರಾಧಿ ಸಾವು

ಪೊಲೀಸರ ವಿಚಾರಣೆಯ ವೇಳೆ, ಅಕ್ಟೋಬರ್ 20ರಂದು ಬೆಳಗಿನ ಜಾವ 01:30 ಗಂಟೆಗೆ ದಿಲೀಪ್ ನಮ್ಮ ಮನೆಗೆ ಬಂದಿದ್ದು, ನಾವಿಬ್ಬರೂ ಸೇರಿ ಅಲ್ಲಿಯೆ ಇದ್ದ ಬೆಡ್‌ಶೀಟ್‌ ಅನ್ನು ಬಾಲಕೃಷ್ಣರ ಮುಖಕ್ಕೆ ಒತ್ತಿ ಹಿಡಿದು ಅವರನ್ನು ಕೊಲೆ ಮಾಡಿರುತ್ತೇವೆ” ಎಂದು ತಪ್ಪೊಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

IMG 20241025 WA0489
ಆರೋಪಿ ದಿಲೀಪ್

ಊಟದಲ್ಲಿ ವಿಷ ಬೆರೆಸಿದ್ದ ಪತ್ನಿ ಪ್ರತಿಮಾ?

ಬಾಲಕೃಷ್ಣರ ಸಾವಿನ ಬಳಿಕ ಪತ್ನಿ ಪ್ರತಿಮಾಳ ಚಲನವಲನ ಬಗ್ಗೆ ಆಕೆಯ ಸಹೋದರ ಸಂದೀಪ್ ಅನುಮಾನಗೊಂಡಿದ್ದ. ಬಳಿಕ ಬಾಲಕೃಷ್ಣರ ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X