ಉಡುಪಿ | ಅಸಹಾಯಕ ಸ್ಥಿಯಲ್ಲಿದ್ದ ಯುವಕನ‌ ರಕ್ಷಣೆ: ಪೊಲೀಸರಿಂದ ಸಂಬಂಧಿಕರ ಪತ್ತೆ ಕಾರ್ಯ ಯಶಸ್ವಿ

Date:

Advertisements

‌‌‌‌‌‌‌ಉಡುಪಿ ನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸನಿಹ‌‌ ಅಸಹಾಯಕ ಸ್ಥಿತಿಯಲ್ಲಿದ್ದ‌ ಅಪರಿಚಿತ ವ್ಯಕ್ತಿಯನ್ನು ರಕ್ಷಿಸಿ, ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಗೆ ದಾಖಲುಪಡಿಸಿರುವ‌ ಘಟನೆ ನಡೆದಿದೆ.

ನಗರದ ರಸ್ತೆಗಳಲ್ಲಿ ಯುವಕನೊಬ್ಬ ಅನಾವಶ್ಯಕ ಅಲೆದಾಡುವುದನ್ನು ಗಮನಿಸಿದ, ಆಭರಣ ಮಳಿಗೆಯ ಸಿಬ್ಬಂದಿ ರುಡಲ್ಫ್ ಪ್ರಜ್ವಲ್ ಅವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.‌

ತಕ್ಷಣ ಸ್ಥಳಕ್ಕೆ ಬಂದ ನಿತ್ಯಾನಂದ ಅವರು ಯುವಕನನ್ನು ವಿಚಾರಿಸಿದಾಗ ಸರಿಯಾದ‌ ಸ್ಪಂದನೆ ದೊರೆಯಲಿಲ್ಲ, ಮಾನಸಿಕ ರೋಗಿ ಎಂದು‌ ತಿಳಿದುಬಂದಿತು. ಯುವಕನಿಗೆ ತುರ್ತು ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ನಗರ ಪೋಲಿಸ್ ಠಾಣೆಯ‌ ಎ.ಎಸ್.ಐ ಹರೀಶ್ ಅವರಿಂಧ ನೆರವು ಪಡೆದು‌, ರಕ್ಷಿಸಲ್ಪಟ್ಟ‌ ಯುವಕನನ್ನು ದೊಡ್ಡಣಗುಡ್ಡೆಯ ಬಾಳಿಗ‌ ಆಸ್ಪತ್ರೆಗೆ ದಾಖಲುಪಡಿಸಿದ್ದರು.

Advertisements

ಯುವಕನ ಸಂಬಂಧಿಕರ ವಿವರಗಳನ್ನು ಪತ್ತೆ ಹಚ್ಚಲೆಂದು ಪೊಲೀಸರು ಯುವಕನ ಫೋಟೋ ಹಾಗೂ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದರು. ಆ ಬಳಿಕ ಯುವಕನ ಸಂಬಂಧಿಕರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು.‌

ಇದನ್ನು ಓದಿದ್ದೀರಾ? ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

ಯುವಕನ‌ ಹುಡುಕಾಟದಲ್ಲಿದ್ದ ಮನೆಯವರು, ಬೆಂಗಳೂರಿನಿಂದ ಬಂದು ಆಸ್ಪತ್ರೆಯಲ್ಲಿ ಯುವಕನನ್ನು ಸಂಪರ್ಕಿಸಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X