ಉಡುಪಿ | ಯುದ್ದ ಜನತೆಯ ಶತ್ರು: ಬಾಲಕೃಷ್ಣ ಶೆಟ್ಟಿ

Date:

ಯುದ್ಧವನ್ನು ಧರ್ಮಾಧಾರಿತವಾಗಿ ಬೆಂಬಲಿಸುವುದು ಬಹಳ ಅಪಾಯಕಾರಿ ಎಲ್ಲಾ ರೀತಿಯ ಯುದ್ಧಗಳು ಎಲ್ಲಾ ಧರ್ಮದ ಜನರ ಬದುಕನ್ನು ಹಾಳು ಮಾಡುತ್ತದೆ.

- Advertisement -

ಯುದ್ಧದ ಪರಿಣಾಮವಾಗಿ ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ ಆದುದರಿಂದ ಯುದ್ಧವನ್ನು ಮತಧರ್ಮ ಮರೆತು ವಿರೋಧಿಸಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ರಾಜ್ಯ ಅಧ್ಯಕ್ಷರಾದ ಬಾಲಕ್ರಷ್ಣ ಶೆಟ್ಟಿ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಅವರು ಬೈಂದೂರು ಅಂಬೇಡ್ಕರ್ ಭವನದಲ್ಲಿ ನಡೆದ 8 ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

1010040068

ಅಂಬೇಡ್ಕರ್ ಸೇವಾ ಕೇಂದ್ರ ಹಾಗೂ ಉಚಿತ ಆರೋಗ್ಯ ತಪಾಸಣಾ ಹೆಸರಿನಲ್ಲಿ ಕಲ್ಯಾಣ ಮಂಡಳಿಯ ಹಣ ಖಾಸಗೀಯವರ ಪಾಲಾಗುವಂತೆ ಮಾಡುತ್ತಿದೆ ಇದು ಕಾರ್ಮಿಕರ ಹಣ ಭ್ರಷ್ಟಾಚಾರ ನಡೆಸಲು ಅನುಕೂಲವಾಗಿದೆ ಎಂದು ಅವರು ದೂರಿದರು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ: ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್ ಗಳು ರಾಜ್ಯ ಸರ್ಕಾರ ಜಾರಿ ಮಾಡಿದರೆ ಬಹುತೇಕ ಸೌಲಭ್ಯಗಳಿಂದ ಕಟ್ಟಡ ಕಾರ್ಮಿಕರು ಹಾಗೂ ಸಂಘಟಿತ ಕಾರ್ಮಿಕರು ವಂಚಿತರಾಗುತ್ತಾರೆ. ಇದರ ಭಾಗವಾಗಿಯೇ ಬಂದ ಸೆಸ್ 50 ಲಕ್ಷಕ್ಕೆ ಏರಿಸಿರುವುದು ಸೌಲಭ್ಯ ಕಸಿಯುವ ಪ್ರಯತ್ನ ಎಂದು ಹೇಳಿದರು.

1010036681 1
ಜಾಹಿರಾತು

ರಾಜ್ಯದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಕೌಶಲ್ಯ ತರಬೇತಿ ಹೆಸರಿನಲ್ಲಿ ರೂ 600 ಕೋಟಿ ಹಾಗೂ ಶ್ರಮಿಕ ಶಾಲೆಗಳ ಹೆಸರಿನಲ್ಲಿ 3000 ಕೋಟಿ ಹಾಗೂ ಕಿಟ್ ಗಳ ಖರೀದಿ ಹಾಗೂ ತಾತ್ಕಾಲಿಕ ವಸತಿ ಹೆಸರಿನಲ್ಲಿ 200ಕ್ಕೂ ಅಧಿಕ ಕೋಟಿ ಕಲ್ಯಾಣ ಮಂಡಳಿ ಹಣವನ್ನು ಲೂಟಿ ಹೊಡೆಯಲು ರಾಜ್ಯ ಬಜೆಟ್ ನಲ್ಲಿ ಘೋಷಿಸಿದೆ ಆದರೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನಸಹಾಯ ಎರಡು ವರ್ಷಗಳಿಂದ ಖಾತೆಗೆ ಜಮೆ ಮಾಡದೇ ವಂಚಿಸಿದೆ ಇದು ನೈಜ ಕಾರ್ಮಿಕರಿಗೆ ಮಾಡಿದ ಮೋಸ ಇದರ ವಿರುದ್ಧ ಅಧಿವೇಶನಕ್ಕೂ ಮುಂಚಿತವಾಗಿ ರಾಜ್ಯದ ಎಲ್ಲಾ ಶಾಸಕರಿಗೂ ಮನವಿ ನೀಡಲು ಕಟ್ಟಡ ಕಾರ್ಮಿಕರ ರಾಜ್ಯ ಸಮಿತಿ ಕರೆ ನೀಡಿದೆ ಎಪ್ರಿಲ್ 20 ರಂದು ಮಂಡಳಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಹೇಳಿದರು.

ವಾರ್ಷಿಕ ಮಹಾಸಭೆ ಅಧ್ಯಕ್ಷತೆ ಸಂಘದ ಅಧ್ಯಕ್ಷರಾದ ರಾಜೀವ ಪಡುಕೋಣೆ ವಹಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು. ವರದಿ ಮತ್ತು ಲೆಕ್ಕ ಪತ್ರ ಮೇಲೆ ಚರ್ಚೆ ನಡೆಸಿ ಅಂಗೀಕಾರ ಮಾಡಲಾಯಿತು.

1010040067

ಸ್ವಾಗತವನ್ನು ನಾಗರತ್ನ ಪಡುವರಿ ಮಾಡಿದರು.ಶ್ರದ್ಧಾಂಜಲಿ ಠರಾವು ಮರ್ಲ ದೇವಾಡಿಗ ಮಾಡಿದರು.ಗೋಪಾಲಕ್ರಷ್ಣ ದೇವಾಡಿಗ ಅತಿಥಿಗಳನ್ನು ಗೌರವಿಸಿದರು.

ಜನವಾದಿ ಮಹಿಳಾ ಸಂಘಟನೆಯ ಶೋಭಾ ಕೆರೆಮನೆ ಮಹಾಸಭೆಗೆ ಶುಭಕೋರಿ ಮಾತನಾಡಿದರು. ವೇದಿಕೆಯಲ್ಲಿ ಸಂಘದ ಮುಖಂಡರಾದ ಶ್ರೀಧರ ಉಪ್ಪುಂದ,ಮಂಜು ಪೂಜಾರಿ, ಅಮ್ಮಯ್ಯ ಪೂಜಾರಿ, ನಾಗರತ್ನ ನಾಡ, ಪದ್ಮಾವತಿ, ವಿಜಯ ಬಿ,ರಾಮ ಕಂಬದಕೋಣೆ, ಉದಯ ಗಾಣಿಗ, ರೋನಿ ವಿನೋದ್ ನಜ್ರತ್, ಅಣ್ಣಪ್ಪ ದೇವಾಡಿಗ, ಶಾಂತಾ ಪೂಜಾರಿ,ಲಕ್ಷ್ಮಣ ದೇವಾಡಿಗ ಇದ್ದರು.

ಮಹಾಸಭೆ ಹೊಸ ಸಮಿತಿ ಆಯ್ಕೆ ಮಾಡಿತು. ಅಧ್ಯಕ್ಷರಾಗಿ ರಾಜೀವ ಪಡುಕೋಣೆ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ತೊಂಡೆಮಕ್ಕಿ, ಕೋಶಾಧಿಕಾರಿಯಾಗಿ ಗೋಪಾಲ ಕೃಷ್ಣ ದೇವಾಡಿಗ ಸೇರಿದಂತೆ 19 ಮಂದಿ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಆಯ್ಕೆ ಮಾಡಿತು. ಗಣೇಶ್ ತೊಂಡೆಮಕ್ಕಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...