ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

Date:

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಗೆ ಭಾನುವಾರ ದಿಡೀರ್ ಭೇಟಿ ನೀಡಿದರು.

- Advertisement -

ಶಾಲಾ ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಪ್ರತಿ ಗುರುವಾರ ಕೈಗೊಂಡು, ಮಕ್ಕಳಿಗೆ ಮಕ್ಕಳ ಹಕ್ಕುಗಳ ಸಂಭಂಧಿತ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಜೆಜೆಬಿ ಬೋರ್ಡ್ ಮುಂದೆ ಸಾದರ ಪಡಿಸಲು ಫಾರಂ ನಂ: 1 ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಮಕ್ಕಳನ್ನು ಸಮಾಲೋಚನೆಗೆ ಕರೆದೊಯ್ದಾಗ ಫಾರಂ:17 ಕಡ್ಡಾಯವಾಗಿ ಭರ್ತಿ ಮಾಡಬೇಕು ಎಂದು ಸೂಚಿಸಿದರು.

ಬಳಿಕ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯ ವೈಖರಿಯನ್ನು ಗಮನಿಸಿದ ಅವರು, ತೆರದ ಮನೆ ಕಾರ್ಯಕ್ರಮದ ರಿಜಿಸ್ಟ್ರಾರ್ ಹಾಗೂ ಮಕ್ಕಳ ಪ್ರಕರಣಗಳ ಕುರಿತ ದಾಖಲು ವಹಿಯನ್ನು ಪರಿಶೀಲಿಸಿದರು.

ಮಕ್ಕಳ ಅಪಹರಣ ಪ್ರಕರಣ, ಪೋಕ್ಸೋ ಪ್ರಕರಣ, ಬಾಲ್ಯ ವಿವಾಹ ಪ್ರಕರಣ ಸೇರಿದಂತೆ ಮಕ್ಕಳ ಹಕ್ಕುಗಳ ಉಲ್ಲಂಘನೆ
ವಿಷಯಕ್ಕೆ ಸಂಬಂಧಿತ ಪ್ರಕರಣಗಳನ್ನು ಸಕಾಲದಲ್ಲಿ
ವರದಿ ಮಾಡಿಕೊಳ್ಳಲು ಸೂಚಿಸಿದರು.

1010036681
ಜಾಹಿರಾತು

ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ-2015, ಕಲಂ 107 ಹಾಗೂ ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಮಾದರಿ ನಿಯಮ -2016 ರ 8(6) ಹಾಗೂ 86(11) ಅನ್ವಯ ಪದನಿಮಿತ್ತ ಅಧಿಕಾರಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತೆ ಮಾಹಿತಿ ಫಲಕವನ್ನು ಹಾಗೂ ಮಕ್ಕಳ ಸಹಾಯ ವಾಣಿ ಸಂಖ್ಯೆ 1098 ಶಾಶ್ವತ ಫಲಕದಲ್ಲಿ ತ್ವರಿತವಾಗಿ ಅಳವಡಿಸಬೇಕು ಎಂದು
ಆಯೋಗದ ಅಧ್ಯಕ್ಷರು ತಿಳಿಸಿದರು.

ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿ ಎಸ್ ಐ ಸಮರ್ಥ ಗಾಣಿಗೇರ್ ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...