ಕಾಪು | ಯುನಾನಿ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಉಚಿತ ಹಿಜಾಮ ಚಿಕಿತ್ಸಾ ಶಿಬಿರ

Date:

ಯುನಾನಿ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಜಮಾ ಆತೆ ಇಸ್ಲಾಮೀ ಹಿಂದ್ ಕಾಪು ಶಾಖೆ ಹಾಗೂ ಹೆಚ್.ಆರ್.ಎಸ್ ಕಾಪು ಗ್ರೂಪ್ ವತಿಯಿಂದ ಕೊಂಬಗುಡ್ಡೆಯ ಇಬ್ರಾಹೀಮ್ ಮಂಝಿಲ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಹಿಜಾಮ (ಕಪಿಂಗ್ ಥೆರಪಿ) ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಆಯುಷ್ ವಿಭಾಗದ ವೈದ್ಯಾಧಿಕಾರಿ ಹಾಗೂ ಯುನಾನಿ ವೈದ್ಯರಾದ ಸಯ್ಯದ್ ಝಾಹಿದ್ ಹುಸೈನ್, ಹಿಜಾಮ ಚಿಕಿತ್ಸೆಯು ದೇಹದಲ್ಲಿರುವ ಮಲಿನ ರಕ್ತವನ್ನು ಹೊರತೆಗೆದು ಆರೋಗ್ಯ ಸುಧಾರಣೆಗೆ ಸಹಕಾರಿ ಎಂದು ತಿಳಿಸಿದರು. ಯುನಾನಿ ಚಿಕಿತ್ಸಾ ಪದ್ಧತಿ ಪ್ರಾಚೀನ ವೈದ್ಯಕೀಯ ವಿಧಾನವಾಗಿದ್ದು, ಇದರಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮಾ ಆತೆ ಇಸ್ಲಾಮೀ ಹಿಂದ್ ಕಾಪು ಶಾಖೆಯ ಅಧ್ಯಕ್ಷ ಅನ್ವರ್ ಅಲಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ಆರೋಗ್ಯವಂತರಾಗಿದ್ದರೆ ಕುಟುಂಬ ಹಾಗೂ ಸಮಾಜವೂ ಆರೋಗ್ಯವಂತವಾಗಿರುತ್ತದೆ ಎಂದರು. ಸ್ವಚ್ಛತೆ, ನಿಯಮಿತ ಜೀವನ, ಮಿತಾಹಾರ, ವ್ಯಾಯಾಮ ಹಾಗೂ ಮದ್ಯಪಾನ, ತಂಬಾಕು ಸೇರಿದಂತೆ ದುಷ್ಚಟಗಳಿಂದ ದೂರವಿರುವುದು ಉತ್ತಮ ಆರೋಗ್ಯಕ್ಕೆ ಅಗತ್ಯ ಎಂದು ಅವರು ಕರೆ ನೀಡಿದರು.

1011324384

ಕಾರ್ಯಕ್ರಮವು ಮುಹಮ್ಮದ್ ಹಾಶಿಮ್ ಸಾಹೇಬರ ಕುರ್‌ಆನ್ ಪಠಣದೊಂದಿಗೆ ಆರಂಭವಾಯಿತು. ಕಾಪು ಶಾಖೆಯ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಸಾಹೇಬ್ ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಿದರು. ಮುಖ್ಯ ಅತಿಥಿಯಾಗಿ ಎಕ್ಕಾವನ್ ನಸೀರ್ ಅಹ್ಮದ್ ಶುಭ ಸಂದೇಶ ನೀಡಿದರು. ಶೇಖ್ ಮುಹಮ್ಮದ್ ಶರೀಫ್ ಧನ್ಯವಾದ ಸಲ್ಲಿಸಿದರು. ಹೆಚ್.ಆರ್.ಎಸ್ ಕಾಪು ಗ್ರೂಪ್ ಲೀಡರ್ ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.

ಶಿಬಿರದಲ್ಲಿ ಬಹು ಸಂಖ್ಯೆಯ ಪುರುಷರು ಭಾಗವಹಿಸಿ ಹಿಜಾಮ ಚಿಕಿತ್ಸೆಯ ಪ್ರಯೋಜನ ಪಡೆದರು. ನುರಿತ ಯುನಾನಿ ವೈದ್ಯರು ಮತ್ತು ಅವರ ತಂಡ ಚಿಕಿತ್ಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...