ಉಡುಪಿ | ಸಮಾಧಾನ ಮಹೋತ್ಸವ ವಿರೋಧ ಸಂವಿಧಾನಬಾಹಿರ – ಸಾಲಿಡಾರಿಟಿ ಆಗ್ರಹ

Date:

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಧಾರ್ಮಿಕ ಆಚರಣೆಗಳು ನಾಗರಿಕರ ಮೂಲಭೂತ ಹಕ್ಕಾಗಿದ್ದು, ಅದನ್ನು ನಿರ್ಬಂಧಿಸುವ ಅಥವಾ ತಡೆಯೊಡ್ಡುವ ಅಧಿಕಾರ ಯಾರಿಗೂ ಇಲ್ಲ ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ ಘಟಕ ತಿಳಿಸಿದೆ.

- Advertisement -

ಉಡುಪಿಯಲ್ಲಿ ಕ್ರೈಸ್ತ ಸಮುದಾಯ ಹಮ್ಮಿಕೊಂಡಿರುವ ‘ಸಮಾಧಾನ ಮಹೋತ್ಸವ’ಕ್ಕೆ ಹಿಂದೂ ಜಾಗರಣ ವೇದಿಕೆಯ ಕೆಲವು ಮಂದಿ ವಿರೋಧ ವ್ಯಕ್ತಪಡಿಸುತ್ತಿರುವುದು ಸಂವಿಧಾನಬಾಹಿರ ನಡೆಯಾಗಿದ್ದು, ಇಂತಹ ಕ್ರಮಗಳು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಅಪಾಯಕಾರಿ ಪ್ರಯತ್ನಗಳಾಗಿವೆ ಎಂದು ಸಂಘಟನೆ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಪ್ರಸ್ತುತ ಕ್ರೈಸ್ತ ಬಾಂಧವರು ಪವಿತ್ರ ಶಿಲುಬೆಯ ಶ್ರಮದಿನದ ಧ್ಯಾನಕಾಲದಲ್ಲಿ ತೊಡಗಿಕೊಂಡಿದ್ದು, ಪ್ರತಿವರ್ಷವೂ ಈ ಅವಧಿಯಲ್ಲಿ ಸಮಾಧಾನ ಮಹೋತ್ಸವವನ್ನು ಆಯೋಜಿಸುವುದು ಸಂಪ್ರದಾಯವಾಗಿದೆ. ಇದನ್ನು ವಿರೋಧಿಸುವ ಮೂಲಕ ಶಾಂತಿ-ಸೌಹಾರ್ದತೆ ಕದಡುವ ಪ್ರಯತ್ನ ಸರಿಯಲ್ಲ ಎಂದು ತಿಳಿಸಿದೆ.

Untitled design 20260315 161436 0000
ಜಾಹಿರಾತು

ಧಾರ್ಮಿಕ ನಂಬಿಕೆಗಳನ್ನು ಆಚರಿಸುವ ಹಕ್ಕು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾಗಿ ಲಭ್ಯವಿದ್ದು, ಅದಕ್ಕೆ ತಡೆಯೊಡ್ಡುವ ಅಧಿಕಾರ ಯಾರಿಗೂ ಇಲ್ಲ. ಸಮಾಧಾನ ಮಹೋತ್ಸವ ಕ್ರೈಸ್ತರ ಆಧ್ಯಾತ್ಮಿಕ ಕಾರ್ಯಕ್ರಮವಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸುವ ಹಕ್ಕು ಯಾರಿಗೂ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಹಿಂದೂ ಜಾಗರಣ ವೇದಿಕೆಯ ಕೆಲ ಮುಖಂಡರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಈ ಹಿಂದೆ ಕೂಡ ಇಂತಹ ಆರೋಪಗಳು ಕೇಳಿಬಂದಿವೆ. ಉಡುಪಿ ಶಾಂತಿ ಪ್ರಿಯ ನಾಗರಿಕರ ಜಿಲ್ಲೆಯಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತರ ಆಚರಣೆಗಳ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವುದು ಅಕ್ಷಮ್ಯ ಎಂದು ಸಾಲಿಡಾರಿಟಿ ತಿಳಿಸಿದೆ.

ಇಂತಹವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮಾಧಾನ ಮಹೋತ್ಸವಕ್ಕೆ ಭದ್ರತೆ ಒದಗಿಸಿ ಸಂವಿಧಾನದ ಆಶಯವನ್ನು ಎತ್ತಿಹಿಡಿಯಬೇಕು ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ ಅಧ್ಯಕ್ಷ ಅಫ್ವಾನ್ ಬಿ. ಹೂಡೆ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...