ಉಡುಪಿ ಜಿಲ್ಲೆಯಲ್ಲಿ ₹2,593 ಕೋಟಿ ರಫ್ತು ವಹಿವಾಟು; ಮತ್ತಷ್ಟು ಉತ್ತೇಜನಕ್ಕೆ ಜಿಲ್ಲಾಧಿಕಾರಿ ಕರೆ

Date:

ಉಡುಪಿ ಜಿಲ್ಲೆಯಲ್ಲಿರುವ ಕೈಗಾರಿಕಾ ಘಟಕಗಳಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು ಯುವಜನರಿಗೆ ನೀಡುವ ಮೂಲಕ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕೈಗಾರಿಕಾ ತರಬೇತಿ ಸಂಸ್ಥೆಗಳು ಕಾರ್ಯಪ್ರವೃತ್ತವಾಗಬೇಕು ಎಂದು ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ನಗರದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಜಿಲ್ಲೆಯಲ್ಲಿ ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳ ಸ್ಥಾಪನೆಯಿಂದ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಲಿದ್ದು, ಉದ್ಯೋಗಕ್ಕಾಗಿ ಹೊರ ಜಿಲ್ಲೆಗಳಿಗೆ ತೆರಳುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಹೇಳಿದರು. ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

1011324723

ಜಿಲ್ಲೆಯ ಐಟಿಐ, ಡಿಪ್ಲೋಮಾ ಹಾಗೂ ಜಿಟಿಟಿಸಿ ಸಂಸ್ಥೆಗಳಲ್ಲಿ ಕೈಗಾರಿಕೆಗಳಿಗೆ ಅಗತ್ಯವಿರುವ ತರಬೇತಿ ಕೋರ್ಸ್‌ಗಳನ್ನು ಇದೇ ಶೈಕ್ಷಣಿಕ ವರ್ಷದಲ್ಲಿ ಆರಂಭಿಸಿ, ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಹಾಗೂ ಅಪ್ರೆಂಟಿಸ್‌ಶಿಪ್ ಅವಕಾಶಗಳನ್ನು ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲೆಯ 37 ಸಣ್ಣ ಕೈಗಾರಿಕೆಗಳಲ್ಲಿ ಶೇ.91.8, 47 ಮಧ್ಯಮ ಕೈಗಾರಿಕೆಗಳಲ್ಲಿ ಶೇ.95.1 ಮತ್ತು 7 ಬೃಹತ್ ಕೈಗಾರಿಕೆಗಳಲ್ಲಿ ಶೇ.92.4 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡಲಾಗಿದ್ದು, ಒಟ್ಟಾರೆ 91 ಘಟಕಗಳಲ್ಲಿ ಶೇ.93.7 ರಷ್ಟು ಉದ್ಯೋಗ ಸ್ಥಳೀಯರಿಗೆ ಲಭ್ಯವಾಗಿದೆ ಎಂದು ತಿಳಿಸಿದರು.

ಹೆಬ್ರಿ ತಾಲೂಕಿನ ಶಿವಪುರ (74.84 ಎಕರೆ), ಕೆರೆಬೆಟ್ಟು (38.75 ಎಕರೆ), ಕಾರ್ಕಳದ ನಿಟ್ಟೆ (50.42 ಎಕರೆ) ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು (101.19 ಎಕರೆ) ಪ್ರದೇಶಗಳಲ್ಲಿ ಹೊಸ ಕೈಗಾರಿಕಾ ವಲಯಗಳನ್ನು ಅಭಿವೃದ್ಧಿಪಡಿಸಲು ಭೂಸ್ವಾಧೀನ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದರು.

ಕೈಗಾರಿಕಾ ನಿವೇಶನಗಳನ್ನು ಪಡೆದು ಮೂರು-ನಾಲ್ಕು ವರ್ಷಗಳಾದರೂ ಘಟಕಗಳನ್ನು ಆರಂಭಿಸದ ಉದ್ಯಮಿಗಳಿಗೆ ಎರಡು ತಿಂಗಳ ಗಡುವು ನೀಡಿದ ಜಿಲ್ಲಾಧಿಕಾರಿ, ಈ ಅವಧಿಯಲ್ಲೂ ಕೈಗಾರಿಕೆ ಆರಂಭಿಸದಿದ್ದರೆ ನಿವೇಶನಗಳನ್ನು ಇತರರಿಗೆ ಮರುಹಂಚಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರೆಡಿ ಮಿಕ್ಸ್ ಕಾಂಕ್ರೀಟ್ ಘಟಕಗಳ ಸ್ಥಾಪನೆಗೆ ಬಂದಿರುವ ಅರ್ಜಿಗಳ ಕುರಿತು ಸುತ್ತಮುತ್ತಲಿನ ಕೈಗಾರಿಕೆಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಸಮಗ್ರ ಪರಿಶೀಲನೆ ನಡೆಸಿ ಬಳಿಕ ಅನುಮತಿ ನೀಡಬೇಕು ಎಂದು ಸೂಚಿಸಿದರು.

ಕಳೆದ ಸಾಲಿನಲ್ಲಿ ಮರೈನ್ ಉತ್ಪನ್ನಗಳು, ಗೋಡಂಬಿ ಹಾಗೂ ಕಾಫಿ ಬೀನ್ ಸೇರಿದಂತೆ ಒಂಬತ್ತು ಪ್ರಮುಖ ಉತ್ಪನ್ನಗಳ ರಫ್ತಿನಿಂದ ₹2,593 ಕೋಟಿಗೂ ಅಧಿಕ ವಹಿವಾಟು ನಡೆದಿದ್ದು, ಜಿಲ್ಲೆಯಿಂದ ಇನ್ನಷ್ಟು ರಫ್ತುಗಳನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಸ್ವಚ್ಛತೆ, ಒಣತ್ಯಾಜ್ಯ ಸಂಗ್ರಹ ಘಟಕಗಳ ಸ್ಥಾಪನೆ ಹಾಗೂ ಕೈಗಾರಿಕೆಗಳಲ್ಲಿ ಉತ್ಪತ್ತಿಯಾಗುವ ದ್ರವತ್ಯಾಜ್ಯಗಳ ಸಂಸ್ಕರಣೆಗೆ ಕೈಗಾರಿಕೋದ್ಯಮಗಳು ಸಹಕರಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಉದ್ಯಮಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...