ಉಡುಪಿ | ಸತತ 26ನೇ ವರ್ಷ ಉಚಿತ ನೋಟ್‌ ಪುಸ್ತಕ ವಿತರಣೆ: ಎಸ್‌ಎಸ್‌ಎಫ್‌ ಹೊನ್ನಾಳ ಘಟಕದ ಸಮಾಜಮುಖಿ ಸೇವೆ

Date:

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ಎಸ್‌ಎಸ್‌ಎಫ್) ಹೊನ್ನಾಳ ಘಟಕದ ವತಿಯಿಂದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸತತ 26ನೇ ಬಾರಿಗೆ ಉಚಿತ ನೋಟ್‌ ಪುಸ್ತಕ ವಿತರಣಾ ಸಮಾರಂಭವು ಇಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

- Advertisement -

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಎಸ್‌ಎಸ್‌ಎಫ್ ಕುಂದಾಪುರ ಡಿವಿಜನ್ ಅಧ್ಯಕ್ಷ ಸುಲ್ತಾನ್ ಹಾಶಿಮಿ, ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಕಳೆದ ಹಲವು ದಶಕಗಳಿಂದ ಸಂವಿಧಾನದ ಅಡಿಯಲ್ಲಿ ವಿದ್ಯಾರ್ಥಿ ಯುವಕರ ನಡುವೆ ಶಾಂತಿ, ಸೌಹಾರ್ದತೆ, ಸಾಮರಸ್ಯದ ಕೆಲಸವನ್ನು ಮಾಡುತ್ತದ್ದಾ ಬಂದಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದುವರೆದಿದೆ ಅದರ ಭಾಗವೇ ಗ್ರಾಮೀಣ ಪ್ರದೇಶದಲ್ಲಿಯೂ ಸಹ ಎಸ್‌ಎಸ್‌ಎಫ್ ಕಳೆದ 26 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಈ ಸೇವಾ ಕಾರ್ಯವು ಇತರ ಸಂಘಟನೆಗಳಿಗೂ ಮಾದರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...
WhatsApp Image 2026 06 20 at 7.53.07 PM

ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬ್ರಹ್ಮಾವರ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಆಶಾ ಕಿರಣ್ ಎನ್. ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ನೆರವುಗಳು ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ಮೂಡಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ಎಸ್. ಅಬ್ದುಲ್ ಶುಕೂರ್, ಉಸ್ತಾದ್ ತೌಫೀರ್ ಅಮಾನಿ, ಕುಂದಾಪುರದ ಅಶ್ರಫ್ ಉಸ್ತಾದ್, ಶಾಲೆಯ ಮುಖ್ಯೋಪಾಧ್ಯಾಯ ರೋಬಿ ಪಿಂಟೊ, ನಿವೃತ್ತ ಮುಖ್ಯೋಪಾಧ್ಯಾಯ ಇಮಾಮ್ ಸಾಹೇಬ್ ಟಂಕಸಾಲಿ, ಮಾಜಿ ಪ್ರಭಾರ ಮುಖ್ಯೋಪಾಧ್ಯಾಯೆ ಜಯಲಕ್ಷ್ಮಿ, ಎಸ್‌ಎಸ್‌ಎಫ್ ಉಡುಪಿ ಡಿವಿಜನ್ ಅಧ್ಯಕ್ಷ ಇಮ್ತಿಯಾಜ್ ಸಂತೋಷನಗರ, ಖದೀಮಿ ಜಾಮಿಯಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಖತ್ತಾಬ್, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಮುಸ್ತಾಕ್ ಅಹಮದ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಶಿಕ್ಷಣದ ಮಹತ್ವವನ್ನು ವಿವರಿಸಿದರು.

WhatsApp Image 2026 06 20 at 7.53.07 PM 1

ಅಧ್ಯಕ್ಷತೆಯನ್ನು ಎಸ್‌ಎಸ್‌ಎಫ್ ಹೊನ್ನಾಳ ಘಟಕದ ಅಧ್ಯಕ್ಷ ಮೊಹಮ್ಮದ್ ಶೆಹರಾಜ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು. ಅದರ ಜೊತೆಗೆ ಶಾಲೆಗೆ ಅಗ್ಯವಿದ್ದ ಎರಡು ಫ್ಯಾನಗಳನ್ನು ಎಸ್‌ ಎಸ್‌ ಎಫ್‌ ವತಿಯಿಂದ ಶಾಲೆಗೆ ಕೊಡುಗೆಯಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ ಎಸ್‌ ಎಫ್‌ ಹೊನ್ನಾಳ ಘಟಕದ ಸದಸ್ಯರಾದ ಬಿ.ಎಸ್. ಸೆಹ್ರಾನ್, ಸಾದ್ ಅಲಿ, ಮುಝಮ್ಮಿಲ್, ರಿಹಾನ್, ಅರ್ಸಲಾನ್, ಸಿರಾಜ್, ಶಾಲಾ ಮುಖ್ಯಮಂತ್ರಿಯಾದ ಮೊಹಮ್ಮದ್ ರುಶಾನ್ ಸೇರಿದಂತೆ ಎಸ್‌ಎಸ್‌ಎಫ್ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನೂತನ ಎಸ್‌ ಡಿಎಂ ಸಿ ಅಧ್ಯಕ್ಷರಾದ ಇಮ್ತೀಯಾಜ್‌ ಹೊನ್ನಾಳ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

WhatsApp Image 2026 06 20 at 7.55.28 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...