ಉಡುಪಿ | ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವ ಸಂದರ್ಭದಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳು ನಿರಂತರವಾಗಿ ದೊರಕುವಂತೆ ನೋಡಿಕೊಳ್ಳಬೇಕು ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಸರಕಾರವು ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ರೆಫರ್ ಆದ ರೋಗಿಗಳಿಗೆ ಚಿಕಿತ್ಸಾ ನೆರವು ಸರಿಯಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಬರುತ್ತಿರುವುದಾಗಿ ತಿಳಿಸಿದ ಅವರು, ಕೋ-ಆರ್ಡಿನೇಟರ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ರೋಗಿಗಳಿಗೆ ನೆರವಾಗಬೇಕು ಎಂದು ಹೇಳಿದರು.

ಜಿಲ್ಲಾ ಆಸ್ಪತ್ರೆಯಿಂದ ರೆಫರ್ ಮಾಡಿದ ರೋಗಿಗಳಿಗೆ ಮಣಿಪಾಲದ ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದ್ದು, ಈ ಕುರಿತು ರಾಜ್ಯ ನಿರ್ದೇಶಕರಿಗೆ ಪತ್ರ ಬರೆಯುವಂತೆ ಸೂಚಿಸಿದರು. ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಸಭೆಯನ್ನು ಒಂದು ವಾರದೊಳಗೆ ನಡೆಸುವಂತೆ ನಿರ್ದೇಶನ ನೀಡಿದರು.

ಬ್ರಹ್ಮಾವರ ತಾಲೂಕಿನಲ್ಲಿ ಇಎಸ್‌ಐ ಆಸ್ಪತ್ರೆಗೆ ಮಂಜೂರಾದ 2.5 ಕೋಟಿ ರೂ. ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಲಾಭ ತಲುಪಿಸಬೇಕು ಎಂದು ಸೂಚಿಸಿದ ಅವರು, ಪ್ರಗತಿ ವಿವರ ನೀಡಲು ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಕಾರಣ ಕೇಳಿ ನೋಟಿಸ್ ನೀಡುವಂತೆ ಹೇಳಿದರು.

ಕೊಂಕಣ ರೈಲ್ವೆಗೆ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ರೈಲುಗಳಿಗೆ ನೀರು ಒದಗಿಸಲು ಸೂಕ್ತ ಮೂಲಗಳನ್ನು ಗುರುತಿಸಿ ಜಿಲ್ಲಾ ಪಂಚಾಯತ್‌ನ ತಾಂತ್ರಿಕ ಸಲಹೆಯೊಂದಿಗೆ ಕಾರ್ಯಗತಗೊಳಿಸಬೇಕು ಎಂದು ತಿಳಿಸಿದರು.

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ಹಾಗೂ ಮಳೆಗಾಲದಲ್ಲಿ ಉಂಟಾಗುವ ತೊಂದರೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು. ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರಗೊಳಿಸಿ ಬದಲಿ ರಸ್ತೆ ವ್ಯವಸ್ಥೆಯನ್ನೂ ಒದಗಿಸಬೇಕು ಎಂದರು.

ಗ್ರಾಮೀಣ ಭಾಗಗಳಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಉಂಟಾಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಉಳಿದ ಟವರ್‌ಗಳನ್ನು 4Gಗೆ ಉನ್ನತೀಕರಿಸಿ ವಿದ್ಯುತ್ ವ್ಯತ್ಯಯದ ಸಂದರ್ಭದಲ್ಲೂ ಸೇವೆ ಲಭ್ಯವಾಗುವಂತೆ ಬ್ಯಾಟರಿ ಅಳವಡಿಕೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಮನೆ ಮನೆಗೆ ಎಲ್‌ಪಿಜಿ ಗ್ಯಾಸ್ ಸಂಪರ್ಕ ಒದಗಿಸುವ ಪೈಪ್‌ಲೈನ್ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ಜೂನ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಆದೇಶಿಸಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ಅನುಮೋದನೆ ಪಡೆದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೂ ಆದ್ಯತೆ ನೀಡಬೇಕು ಎಂದರು.

ಕುಸುಮ್-ಬಿ ಮತ್ತು ಕುಸುಮ್-ಸಿ ಯೋಜನೆಗಳ ಪ್ರಗತಿಯನ್ನು ಹೆಚ್ಚಿಸುವಂತೆ ಸೂಚಿಸಿದ ಅವರು, ಜಲ್ ಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ನೀರು ಸರಬರಾಜು ನಿರಂತರವಾಗುವಂತೆ ಮೂಲಗಳನ್ನು ಗುರುತಿಸಲು ಹೇಳಿದರು.

ಘನತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವಿಕೆ ತಡೆಗಟ್ಟಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರನ್ನು ಅಭಿನಂದಿಸಿದರು.

ಸಭೆಯಲ್ಲಿ ಶಾಸಕರು ಯಶ್‌ಪಾಲ್ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...