ಉಡುಪಿ | ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಸೆ.25ರವರೆಗೆ ವಿಸ್ತರಣೆ

Date:

ಗೋಕರ್ಣ ಬೀಚ್​​​ನಲ್ಲಿ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿಕೊಂಡು ಅದೃಷ್ಟವಶಾತ್ ಪಾರಾಗಿರುವ ಬೆನ್ನಲ್ಲೇ ಉಡುಪಿಯ ಮಲ್ಪೆ ಬೀಚ್​​ಗೆ ಸೆಪ್ಟೆಂಬರ್‌ 25ರವರೆಗೆ ಪ್ರವಾಸಿಗರು ಬಾರದಂತೆ ಉಡುಪಿ ಜಿಲ್ಲಾಡಳಿತ ಸೂಚಿಸಿದೆ.

- Advertisement -

ಸಮುದ್ರ ಇನ್ನೂ ಪ್ರಕ್ಷುಬ್ಧವಾಗಿದ್ದು, ಅಲೆಗಳ ಹೊಡೆತವನ್ನು ಅರಿಯದ ಪ್ರವಾಸಿಗರು ಅಪಾಯಕ್ಕೆ ಸಿಲುಕಿಕೊಳ್ಳಬಹುದು ಎಂಬ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಮುಂಜಾಗೃತೆ ವಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಈ ಹಿಂದಿನ ಕ್ರಮದಂತೆ ಸೆಪ್ಟಂಬರ್‌ 15ರಿಂದ ಪ್ರವಾಸಿಗರಿಗೆ ತೆರೆದುಕೊಳ್ಳಬೇಕಾಗಿದ್ದ ಮಲ್ಪೆ ಬೀಚ್‌ ಈ ವರ್ಷ ತೆರವಾಗದೆ ಇರುವುದರಿಂದ ಪ್ರವಾಸಿಗರು ನಿರಾಸೆಗೊಂಡಿದ್ದಾರೆ. ಮಳೆ-ಗಾಳಿಯ ಹಿನ್ನೆಲೆಯಲ್ಲಿ ಸಮುದ್ರ ಈಗಲೂ ಪ್ರಕ್ಷುಬ್ಧ ಇರುವುದರಿಂದ ಪ್ರವಾಸಿಗರಿಗೆ ನೀರಿಗಿಳಿಯಲು ಇರುವ ನಿರ್ಬಂಧವನ್ನು ಸೆ. 25ರವರೆಗೆ ವಿಸ್ತರಿಸಲಾಗಿದೆ” ಎಂದು ಜಿಲ್ಲಾಡಳಿತ ತಿಳಿಸಿದೆ.

ಚೌತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತೀರ್ಥಕ್ಷೇತ್ರಗಳಷ್ಟೇ ಅಲ್ಲದೆ, ಕಡಲ ಕಿನಾರೆಗಳಿಗೂ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಆದರೆ ಸುರಕ್ಷತೆ ದೃಷ್ಟಿಯಿಂದ ಹಲವು ಬೀಚ್​​ಗಳಲ್ಲಿ ನಿರ್ಬಂಧಗಳನ್ನು ಹೇರಲಾಗಿದೆ.

ಇತ್ತೀಚಿನ ಕೆಲ ದಿನಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಇದರೊಂದಿಗೆ ಸಮುದ್ರದ ಅಲೆಗಳಲ್ಲೂ ಏರಿಳಿತವಾಗುತ್ತಿದೆ. ಪ್ರತಿನಿತ್ಯ ಬೀಚ್‌ನಲ್ಲಿ ಜನ ಕಂಡುಬರುತ್ತಿದ್ದಾರೆ. ವಾರಾಂತ್ಯದಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ದೆಹಲಿಯಲ್ಲಿ ಬುಧವಾರ ಮಹತ್ವದ ಸಭೆ; ಸಿಎಂ, ಡಿಸಿಎಂ ಭಾಗಿ

ಈ ತಿಂಗಳಲ್ಲಿ ಸರಣಿ ರಜೆಗಳು ಬಂದಿದ್ದರಿಂದ ಕಡಲ ತೀರದಲ್ಲಿ ಹೆಚ್ಚು ಜನಕಂಡುಬಂದಿದ್ದಾರೆ. ಆದರೆ ನಿರ್ಬಂಧದ ಹಿನ್ನೆಲೆಯಲ್ಲಿ ಯಾವುದೇ ವಾಟರ್‌ಸ್ಪೋರ್ಟ್ಸ್ ಆಗಲಿ, ಸೈಂಟ್‌ಮೇರಿಸ್‌ ದ್ವೀಪ ಯಾನವಾಗಲಿ ಆರಂಭವಾಗಿಲ್ಲ. ಕೆಲವರು ಸೀವಾಕ್‌ ನೋಡಿ ಮರಳುತ್ತಿದ್ದಾರೆ. ಹಾರ್ಬರ್‌ ಕ್ರಾಫ್ಟ್‌ ನಿಯಮಗಳ ಅನ್ವಯ ಮಳೆಗಾಲದ ಹಿನ್ನೆಲೆಯಲ್ಲಿ ಮೇ 16ರಿಂದ ಸೆ. 15ರ ವರೆಗೆ ಬೀಚ್‌ನಲ್ಲಿ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಆದರೆ ಈ ಬಾರಿ ನಿಷೇಧದ ಅವಧಿಯನ್ನು ವಿಸ್ತರಿಸಲಾಗಿದೆ. ಹಾಗಾಗಿ ಪ್ರವಾಸಿಗರು ನಿರಾಶೆಯಿಂದ ಹಿಂದಿರುಗುತ್ತಿದ್ದಾರೆ.

“ಮಳೆಗಾಲದ ಆರಂಭದಲ್ಲಿ ವಿಧಿಸುವ 4 ತಿಂಗಳ ನಿಷೇಧವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ. ಸಮುದ್ರದ ಪ್ರಕ್ಷುಬ್ಧ ಸ್ಥಿತಿ ಮುಂದುವರಿದಿರುವ ಕಾರಣ ಯಾರೂ ಕೂಡ ನೀರಿಗಿಳಿಯಂದಂತೆ ಎಚ್ಚರ ವಹಿಸಲಾಗಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಪ್ರವೇಶಕ್ಕೆ ಅನುಮತಿ ನೀಡಲಾಗುವುದು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...