ಉಳ್ಳಾಲ | ಮೀನು ಸಂಸ್ಕರಣಾ ಘಟಕಗಳಲ್ಲಿ ಕಲ್ಲಿದ್ದಲು ಬಳಸದಂತೆ ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

Date:

Advertisements

ಉಳ್ಳಾಲದ ಕೋಟೆಪುರ ಸಮುದ್ರ ದಂಡೆಯಲ್ಲಿರುವ ಮೀನು ಸಂಸ್ಕರಣಾ ಘಟಕಗಳಲ್ಲಿ ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸದಂತೆ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

“ಸಮುದ್ರ ದಂಡೆಯಲ್ಲಿರುವ ಯುನೈಟೆಡ್ ಮರೈನ್ ಮತ್ತು ಇಂಡೋ ಫಿಶ್ಮೀಲ್ ಕಂಪೆನಿಗಳು ಮೀನು ಸಂಸ್ಕರಿಸಲು ಜನರ ಆರೋಗ್ಯಕ್ಕೆ ಹಾನಿಕಾರಕವಾದ ಕಲ್ಲಿದ್ದಲನ್ನು ಇಂಧನವಾಗಿ ಬಳಸುತ್ತಿವೆ. ಇದು ಅಲ್ಲಿನ ಸ್ಥಳೀಯ ಜನರಲ್ಲಿ ಆರೋಗ್ಯ ಸಮಸ್ಯೆಗಳಾದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ತೊಂದರೆ, ಎದೆನೋವು, ಕೆಮ್ಮು, ಉಸಿರಾಟದ ತೊಂದರೆ ಮುಂತಾದ ಗಂಭೀರ ರೋಗಗಳನ್ನು ಉಂಟು ಮಾಡುತ್ತಿದೆ. ಅಲ್ಲದೆ ಕಲ್ಲಿದ್ದಲಿನ ಬಳಕೆಯಿಂದ ಅಂತರ್ಜಲ ಕಲುಷಿತಗೊಂಡುಮತ್ತಷ್ಟು ಗಂಭೀರ ಪರಿಣಾಮಗಳನ್ನು ಸೃಷ್ಟಿಸುವ ಆತಂಕ ಹೆಚ್ಚಾಗಿದೆ. ಇದನ್ನು ಜಿಲ್ಲಾ ಆರೋಗ್ಯ ಇಲಾಖೆ ಕೂಡ ದೃಢಪಡಿಸಿದೆ. ಇಷ್ಟಾದರೂ ಸಂಸ್ಕರಣಾ ಘಟಕಗಳಲ್ಲಿ ನಿಯಮ ಮೀರಿ ಕಲ್ಲಿದ್ದಲು ಬಳಸಲಾಗುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಕಾನೂನುಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳಿಂದಾಗಿ ನದಿಯೇ ಮುಚ್ಚಿಹೋಗಿ ಕೋಟೆಪುರ ಮತ್ತು ಮುಳಿಹಿತ್ಲು ನಡುವೆ ದೋಣಿ ಸಂಪರ್ಕ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಉಳ್ಳಾಲ ಕೋಟೆಪುರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಘಟಕಗಳು ಮೀನು ಸಂಸ್ಕರಣೆ ಮಾಡುವ ಸಂದರ್ಭದಲ್ಲಿ ಕೆಟ್ಟ ವಾಸನೆ ಹೊರ ಸೂಸುತ್ತಿದ್ದು ಇದರಿಂದ ಸ್ಥಳೀಯ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮೀನು ಸಂಸ್ಕರಣೆಯಿಂದ ಹೊರ ಬರುವ ಕೊಳೆತ ನೀರನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ ಇದರಿಂದ ಜಲಚರ ಜೀವಿಗಳು ನಾಶವಾಗುತ್ತಿವೆ. ಘಟಕಗಳಿಂದ ನಿಯಮ ಮೀರಿದ ಶಬ್ಧಗಳು ಹೊರ ಬರುತ್ತಿದ್ದು, ಶಬ್ಧ ಮಾಲಿನ್ಯವೂ ಉಂಟಾಗುತ್ತಿದೆ. ಒಟ್ಟಾರೆಯಾಗಿ ಮೀನು ಸಂಸ್ಕರಣಾ ಘಟಕಗಳು ಪರಿಸರಕ್ಕೆ ಮಾರಕವಾಗಿದೆ” ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್‌ ಕಳವಳ ವ್ಯಕ್ತಪಡಿಸಿದರು.

Advertisements

“ಈ ಬಗ್ಗೆ ಡಿವೈಎಫ್ಐ ಕಳೆದೆರಡು ವರ್ಷಗಳಲ್ಲಿ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿ ಹೋರಾಟ ಮಾಡುತ್ತಿದೆ. ಆದರೂ ಯಾವುದೇ ಇಲಾಖೆ ಸೂಕ್ತ ಕ್ರಮ ಕೈಗೊಂಡಿಲ್ಲ. ಜನರ ಪ್ರಾಣಕ್ಕೆ ಹಾನಿಯುಂಟು ಮಾಡುವ ಇಂತಹ ಘಟಕಗಳ ವಿರುದ್ದ ಶೀಘ್ರವೇ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಹಾನಿಕಾರಕ ಕಲ್ಲಿದ್ದಲನ್ನು ಇಂಧನವಾಗಿ ಬಳಸುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಉಳ್ಳಾಲ | ಬಂದೂಕು ತೋರಿಸಿ ಹಾಡಹಗಲಲ್ಲೇ ಬ್ಯಾಂಕ್ ದರೋಡೆ

ಈ ವೇಳೆ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಡಿ-ಕೋಟೆಪುರ ಘಟಕ ಅಧ್ಯಕ್ಷ ವಾಕರ್ ಕೋಟೆಪುರ, ಕಾರ್ಯದರ್ಶಿ ನೌಫಲ್ ಕೋಟೆಪುರ, ಮುಖಂಡರಾದ ಮುಝಮ್ಮಿಲ್ ಕೋಟೆಪುರ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X