ಉಳ್ಳಾಲ | ಕಡಲ ಕಿನಾರೆಯಲ್ಲಿರುವ ತ್ಯಾಜ್ಯ ಘಟಕ ತೆರವಿಗೆ ಡಿವೈಎಫ್ಐ ಆಗ್ರಹ

Date:

Advertisements

ಉಳ್ಳಾಲ ಕಡಲ ಕಿನಾರೆಯಲ್ಲಿರುವ ತ್ಯಾಜ್ಯ ಘಟಕವನ್ನು ತೆರವುಗೊಳಿಸಲು ಆಗ್ರಹಿಸಿ ಉಳ್ಳಾಲ ನಗರ ಸಭೆಯ ವಿರುದ್ದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಮಾಡಲಾಯಿತು.

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಮಾತನಾಡಿ, “ಉಳ್ಳಾಲದ ಕಡಲ ಕಿನಾರೆಗೆ ದೇಶದ ಮೂಲೆಮೂಲೆಗಳಿಂದ ಪ್ರವಾಸಿಗರು ಬರುತ್ತಾರೆ. ಆದರೆ, ಆ ಪ್ರವಾಸಿಗರು ಬೀಚ್ ಪ್ರವೇಶಿಸುವಾಗ ಮೂಗು ಮುಚ್ಚಿಕೊಂಡು ಬರಬೇಕಾದ ಪರಿಸ್ಥಿತಿಯನ್ನು ಇಲ್ಲಿನ ನಗರ ಸಭೆ ಮಾಡಿದೆ. ನಗರ ಮುಖ್ಯ ರಸ್ತೆ ಬದಿಯಲ್ಲಿಯೇ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ. ಸುಂದರವಾದ ಕಡಲ ಕಿನಾರೆಯಲ್ಲಿ ದುರ್ನಾತ ಬೀರುತ್ತಿದೆ. ಮೂಕ ಪ್ರಾಣಿಗಳು ಆ ತ್ಯಾಜ್ಯ ತುಂಬಿದ ಪ್ಲಾಸ್ಟಿಕ್ ಗಳನ್ನು ಎಳೆದುಕೊಂಡು ಹೋಗಿ ಎಲ್ಲೆಂದರಲ್ಲಿ ಬಿಸಾಕುತ್ತಿವೆ. ತ್ಯಾಜ್ಯ ಘಟಕದ ಹತ್ತಿರ ಜನವಸತಿ ಪ್ರದೇಶ ಇದ್ದು ಮನೆಯಿಂದ ಹೆೊರಬರದ ಪರಿಸ್ಥಿತಿ ಉಂಟಾಗಿದೆ” ಎಂದು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 04 10 at 12.52.32 PM

“ಹತ್ತಿರದಲ್ಲೇ ಸಾರ್ವಜನಿಕ ಶೌಚಾಲಯ ಇದ್ದರೂ ಘಟಕದ ದುರ್ನಾತದಿಂದ ಪ್ರವಾಸಿಗರು ಉಪಯೋಗ ಮಾಡಲಾಗದೆ ಪಾಳುಬಿದ್ದಿದೆ. ಇಷ್ಟೆಲ್ಲಾ ಅವ್ಯವಸ್ಥೆಗಳ ಆಗರವಾಗಿರುವ ಈ ತ್ಯಾಜ್ಯ ಘಟವನ್ನು ಕೂಡಲೇ ಇಲ್ಲಿಂದ ವರ್ಗಾಯಿಸಬೇಕು. ಇಲ್ಲವಾದಲ್ಲಿ ಉಳ್ಳಾಲ ನಗರ ಸಭೆಯ ಮುಂಭಾಗ ತಂದು ಸುರಿಯತ್ತೇವೆ” ಎಂದು ಎಚ್ಚರಿಕೆ ನೀಡಿದರು.

Advertisements

ಇದನ್ನೂ ಓದಿ: ಮಂಗಳೂರು | ಬಂಜಾರ ಸಮುದಾಯ ಸಂಘಟನೆಯಲ್ಲಿ ಸಂತ ಸೇವಾಲಾಲ್ ಪಾತ್ರ ಅಪಾರ: ಉಳ್ಳಾಲ್

ಪ್ರವಾಸಿಗರಿಗೆ ಡಿವೈಎಫ್ಐ ಕಾರ್ಯಕರ್ತರು ಮಾಸ್ಕ್ ವಿತರಣೆ ಮಾಡಿದರು. ಡಿವೈಎಫ್ಐ ಉಳ್ಳಾಲ ಕಾರ್ಯದರ್ಶಿ ರಿಝ್ವಾನ್ ಹರೇಕಳ, ಕೋಶಾಧಿಕಾರಿ ಅಶ್ಫಾಕ್ ಅಲೇಕಳ, ಮುಖಂಡರಾದ ಅಮೀರ್ ಉಳ್ಳಾಲಬೈಲ್, ರಿಯಾಝ್ ಮಂಗಳೂರು, ನೌಫಲ್ ಅಲೇಕಳ, ಖಲೀಲ್ ಉಳ್ಳಾಲಬೈಲ್ ಉಪಸ್ಥಿತರಿದ್ದರು.

image 7 1 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X