ಮಂಗಳೂರು | ಚೆಂಬುಗುಡ್ಡೆ ಘಟನೆ: ರಾತ್ರೋರಾತ್ರಿ ಶಾಸಕ ಯು ಟಿ ಖಾದರ್ ವಿರುದ್ಧ ಡಿವೈಎಫ್‌ಐ ಪ್ರತಿಭಟನೆ

Date:

Advertisements

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿಯ ವತಿಯಿಂದ ಶನಿವಾರ ತಡರಾತ್ರಿ ಚೆಂಬುಗುಡ್ಡೆಯಲ್ಲಿ ನಾಗರಿಕರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ಅಧ್ಯಕ್ಷ ನ್ಯಾಯವಾದಿ ನಿತಿನ್ ಕುತ್ತಾರ್, “ಉಳ್ಳಾಲದ ಶಾಸಕರಾದ ಸ್ಪೀಕರ್ ಯು.ಟಿ.ಖಾದರ್ ಈ ರಸ್ತೆಯನ್ನು ಟೋಲ್ ಮುಕ್ತ ರಸ್ತೆ ಎಂದು ಜಂಭ ಕೊಚ್ಚಿಕೊಳ್ಳುತ್ತಾರೆ. ಇವತ್ತು ಇಲ್ಲಿ ಅಪಘಾತ ಸಂಭವಿಸಿ ಒಂದು ಮಹಿಳೆಯ ಪ್ರಾಣವೇ ಹೋಗಿದೆ. ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದ ಇವರು ಯಾವ ಸೀಮೆಯ ಅಭಿವೃದ್ದಿಯ ಹರಿಕಾರ” ಎಂದು ಹರಿಹಾಯ್ದರು.ಇನ್ನೊಂದು ವಾರದಲ್ಲಿ ಈ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಶಾಸಕರ ಕಛೇರಿಗೆ ತೆರಳಿ ಕಪ್ಪು ಬಾವುಟ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

IMG 20241110 WA0057

ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಸುಂದರವಾಗಿದ್ದ ತೊಕ್ಕೊಟ್ಟು ಪೇಟೆಯನ್ನು ಹಾಳು ಮಾಡಿದ್ದಾರೆ. ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪರದಾಟುತ್ತಿದ್ದಾರೆ. ರಸ್ತೆಗಳೆಲ್ಲವೂ ಮರಣ ಗುಂಡಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ಉಪಾಧ್ಯಕ್ಷರಾದ ರಝಾಕ್ ಮುಡಿಪು,ಅಶ್ರಫ್ ಹರೇಕಳ ಕೋಶಾಧಿಕಾರಿ ಅಶ್ಫಾಕ್ ಅಲೇಕಳ, ಮುಖಂಡರಾದ ರಝಾಕ್ ಮೊಂಟೆಪದವು, ವಿಕಾಸ್ ಕುತ್ತಾರ್, ಅಲ್ತಾಫ್ ಮುಡಿಪು, ಸಿರಾಜ್ ಮೊಂಟೆಪದವು, ಅಕ್ಷಿತ್ ಕುತ್ತಾರ್,ಇಕ್ಬಾಲ್ ಹರೇಕಳ,ಹೈದರ್ ಆಲಡ್ಕ,ಬಶೀರ್ ಲಚ್ಚಿಲ್,ನೌಫಲ್ ಅಲೇಕಳ,ಸರ್ಫರಾಜ್ ಗಂಡಿ,ಅನ್ಸಾರ್ ಖಂಡಿಗ,ಶಾಫಿ ಮುಡಿಪು,ದಿವ್ಯರಾಜ್ ಕುತ್ತಾರ್,ರಫೀಕ್ ಹರೇಕಳ,ಇಬ್ರಾಹಿಂ ಮದಕ ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ ವಂದಿಸಿದರು.

IMG 20241110 WA0063
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X