ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ವಿತರಣೆ: ಚಿಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

Date:

Advertisements

ಅನಧಿಕೃತ ಡಿಜಿಟಲ್‌ ಖಾತಾ ವಿತರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಹಿನ್ನಲೆಯಲ್ಲಿ ಬೀದರ್‌ ತಾಲ್ಲೂಕಿನ ಚಿಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಆದೇಶ ಹೊರಡಿಸಿದ್ದಾರೆ.

“ಸರ್ಕಾರಿ ಜಮೀನಿನಲ್ಲಿ 11-ಬಿ ಖಾತೆಗಳನ್ನು ನೀಡಿ ಸರ್ಕಾರಕ್ಕೆ ಆರ್ಥಿಕ ನಷ್ಟವನ್ನು ಉಂಟು ಮಾಡಿದ ಸದರಿ ಪಿಡಿಒ ಬಗ್ಗೆ ತನಿಖೆ ನಡೆಸಿ ಅಮಾನತು ಮಾಡಬೇಕೆಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಗಸ್ಟ್‌ 28‌ ರಂದು ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ ದೂರು ಸಲ್ಲಿಕೆಯಾಗಿತ್ತು. ಸದರಿ ದೂರಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಂಟಿಯಾಗಿ ಅಧಿಕಾರಿಗಳನ್ನು ನೇಮಿಸಿ ಆದೇಶಿಸಲಾಗಿತ್ತು.ಸದರಿ ವಿಷಯದ ಕುರಿತು ಪರಿಶೀಲಿಸಿದ ವರದಿ ಆಧರಿಸಿ ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

Advertisements

ಕೃಷಿ ಭೂಮಿಯನ್ನು ಸಕ್ಷಮ ಪ್ರಾಧಿಕಾರದಿಂದ ಭೂ ಪರಿವರ್ತನೆ ಮಾಡದೇ ಇರುವುದರಿಂದ ಮತ್ತು ಲೇಔಟ್ ಅನುಮೋದನೆ ಪಡೆಯದೆ ಡಿಜಿಟಲ್‌ ಖಾತಾಗಳು ವಿತರಣೆ ಮಾಡಿರುವುದರಿಂದ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿರುವುದು ಪರಿಶೀಲನಾ ವರದಿಯಲ್ಲಿ ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ಅಮಾನುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X