ಉಡುಪಿ | ಕೊಳೆತ ಶವದ‌ ವಾರಸುದಾರರು ಪತ್ತೆ; ಅಂತ್ಯಸಂಸ್ಕಾರ

Date:

Advertisements

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಸಂಬಂಧಿಕರನ್ನು ಪತ್ತೆ ಹಚ್ಚುವಲ್ಲಿ ಉಡುಪಿ ನಗರ ಪೋಲಿಸ್ ಠಾಣೆಯ‌ ಪೋಲಿಸರು ಯಶಸ್ವಿಯಾಗಿದ್ದಾರೆ.

ಮಂಗಳೂರಿನಲ್ಲಿದ್ದ ಸಂಬಂಧಿಕರು ಉಡುಪಿಗೆ ಬಂದು‌ ಶವವನ್ನು ಕಂಡು ದೃಢೀಕರಿಸಿದ್ದರು.‌ ಮೃತ ಯುವಕ ಪಶ್ಚಿಮ ಬಂಗಾಳದ ನಿವಾಸಿ, ಕಟ್ಟಡ ಕಾರ್ಮಿಕನೆಂದು ತಿಳಿದುಬಂದಿದೆ. ಗಬ್ಬು ವಾಸನೆ ಬೀರುತ್ತಿರುವ ಶವವನ್ನು ಪಶ್ಚಿಮ ಬಂಗಾಳಕ್ಕೆ‌ ಕೊಂಡೊಯ್ಯಲು ಸಂಬಂಧಿಕರಿಗೆ ಅಸಹಾಯಕ ಪರಿಸ್ಥಿತಿ ಎದುರಾಯಿತು. ಈ ಸಂದರ್ಭ ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ನೆರವಿಗೆ ಬಂದು, ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ ಕಾನೂನು ಪ್ರಕ್ರಿಯೆ ನಡೆದ ಬಳಿಕ ಅಂತ್ಯಸಂಸ್ಕಾರ ನಡೆಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ

Advertisements

ನಗರ ಪೊಲೀಸ್ ಠಾಣೆಯ‌ ಇನ್‌ಸ್ಪೆಕ್ಟರ್ ರಾಮಚಂದ್ರ‌ ನಾಯ್ಕ್ ಎಎಸ್‌ಐ, ಪಿಎಸ್‌ಐ ಪುನೀತ್ ಕುಮಾರ್ ಹಾಗೂ ಎಎಸ್‌ಐ ಹರೀಶ್, ಜಾಸ್ವ‌ ಕಾನೂನು ಪ್ರಕ್ರಿಯೆ ನಡೆಸಿದರು. ಅಂತ್ಯಸಂಸ್ಕಾರ ನಡೆಸಲು ಸತೀಶ್ ಕುಮಾರ್, ಫ್ಲವರ್ ವಿಷ್ಣು, ನಗರಸಭೆ ಸಹಕರಿಸಿತು. ಆದಿ ಉಡುಪಿಯಲ್ಲಿ‌ ನಿರ್ಮಾಣ ಹಂತದ ಕಟ್ಟಡದಲ್ಲಿ ಕೊಳೆತ‌ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನ ಶವವು ಕಳೆದ ಬುಧವಾರ ಪತ್ತೆಯಾಗಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X