ಬೀದರ್‌ | ಬಸವ ಧರ್ಮ ಪೀಠದ ಅಹಿತಕರ ಬೆಳವಣಿಗೆ; ಸ್ವಾಮೀಜಿಗಳ ಭೇಟಿಗೆ ಭಕ್ತರ ನಿರ್ಧಾರ

Date:

Advertisements

ಬಸವ ಧರ್ಮ ಪೀಠದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿವೆ ಎಂದು ಜಿಲ್ಲೆಯ ಬಸವ ಭಕ್ತರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಮಾತೆ ಡಾ. ಗಂಗಾದೇವಿ ಹಾಗೂ ಚನ್ನಬಸವಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ವಿವಾದವನ್ನು ಸೌಹಾರ್ದತೆಯಿಂದ ಬಗೆಹರಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಹಿರಿಯ ಮುಖಂಡ ಬಸವಕುಮಾರ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಗರದ ಅನಿಕೇತನ ಮಕ್ಕಳ ಮಹಾಮನೆಯಲ್ಲಿ ನಡೆದ ಜಿಲ್ಲೆಯ ಬಸವ ಭಕ್ತರ ಸಭೆಯಲ್ಲಿ 40 ಬಸವ ಭಕ್ತರ ಸಮಿತಿ ರಚಿಸಿ, ಸ್ವಾಮೀಜಿಗಳ ಭೇಟಿಗೆ ನಿಯೋಗ ಒಯ್ಯಲು ತೀರ್ಮಾನಿಸಲಾಗಿದೆ.

“ಬಸವ ಧರ್ಮ ಪೀಠ ಬಸವಾಭಿಮಾನಿಗಳ ಹೆಮ್ಮೆ ಹಾಗೂ ಅಭಿಮಾನದ ಸಂಸ್ಥೆಯಾಗಿದೆ. ಬಸವ ತತ್ವವನ್ನು ಜನ ಮನಕ್ಕೆ ಮುಟ್ಟಿಸುವಲ್ಲಿ ಸಂಸ್ಥೆ ಪಾತ್ರ ಬಹಳ ಮಹತ್ವದ್ದಾಗಿದೆ. ಆದರೆ, ಸಂಸ್ಥೆಯಲ್ಲಿ ಇತ್ತೀಚಿನ ಕೆಲ ವರ್ಷಗಳಲ್ಲಿ ನಡೆಯುತ್ತಿರುವ ಅಹಿತಕರ ಬೆಳವಣಿಗೆಗಳು ಬಸವ ಭಕ್ತರಲ್ಲಿ ನೋವು ಉಂಟು ಮಾಡಿವೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು” ಎಂದು ಬಸವಕುಮಾರ ಪಾಟೀಲ ಹೇಳಿದರು.

Advertisements

ಪೀಠದಲ್ಲಿ ಎರಡು ಗುಂಪುಗಳಾಗಿ ಜಗಳ, ದ್ವೇಷ ಬೆಳೆದು, ವಿವಾದ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯದ ಮೆಟ್ಟಿಲು ಏರಿರುವುದಕ್ಕೆ ಅನೇಕರು ಬೇಸರ ವ್ಯಕ್ತಪಡಿಸಿದರು. ಬೀದಿ ಜಗಳ ಹಾಗೂ ಪರಸ್ಪರ ದೋಷಾರೋಪಣೆಯಲ್ಲಿ ತೊಡಗಿರುವುದರಿಂದ ಬಸವ ತತ್ವ ಪ್ರಚಾರ ಹಾಗೂ ಸಂಘಟನೆ ಕಾರ್ಯಕ್ಕೆ ಹಿನ್ನೆಡೆಯಾಗಿರುವುದನ್ನು ಬಸವ ಅನುಯಾಯಿಗಳು ವಿವರಿಸಿದರು.

ಸಮಾಜದ ಹಿತದೃಷ್ಟಿಯಿಂದ ಸ್ವಾಮೀಜಿಗಳು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ದೋಷಾರೋಪ ನಿಲ್ಲಿಸಿ ಜಗಳ ಬಗೆಹರಿಸಿಕೊಳ್ಳಬೇಕು. ಭಕ್ತರಲ್ಲಿನ ಗೊಂದಲ, ಅಪನಂಬಿಕೆ ಹಾಗೂ ಮನಸ್ತಾಪ ದೂರ ಮಾಡಬೇಕು. ಪೀಠದಲ್ಲಿ ಮತ್ತೆ ಶಾಂತಿಯುತ ವಾತಾವರಣ ನೆಲೆಗೊಳ್ಳುವಂತೆ ಮಾಡಬೇಕೆಂದು ಸಭೆಯಲ್ಲಿ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹೊಸ ಓದು | ಸಮಾಜದ ಋಣ ನೆನಪಿಸುವ ‘ಮಹಾಸಂಗ್ರಾಮಿ’

ಸಭೆಯಲ್ಲಿ ಪ್ರಮುಖರಾದ ಚಂದ್ರಪ್ಪ ಬಿರಾದಾರ, ಶಿವಶಂಕರ ಟೋಕರೆ, ಸಿದ್ದಯ್ಯ ಕಾವಡಿ, ನಾಗಯ್ಯ ಸ್ವಾಮಿ, ಶಿವಶರಣಪ್ಪ ವಲ್ಲೇಪುರೆ, ರಾಮಶೆಟ್ಟಿ ಪನ್ನಾಳೆ, ಡಾ. ವೈಜಿನಾಥ ಬುಟ್ಟೆ, ಶಿವಶಂಕರ ರಾಂಪುರೆ, ಬಸವರಾಜ ರುದ್ರವಾಡಿ, ಮಲ್ಲಿಕಾರ್ಜುನ ಸಂಗಮಕರ್, ಜಗನ್ನಾಥ ಪತಂಗೆ, ಬಸವರಾಜ ಪಾಟೀಲ ಶಿವಪುರ, ಅನಿಲಕುಮಾರ ಪನ್ನಾಳೆ ಮನ್ನಳ್ಳಿ, ಸೋಮನಾಥಪ್ಪ ಅಷ್ಟೂರೆ, ಶಂಭುಲಿಂಗ ಕಾಮಣ್ಣ, ಜಗನ್ನಾಥ ಪತಂಗೆ, ಬಸವರಾಜ ಪಾಟೀಲ ಶಿವಪುರ, ರವಿ ಶಂಭು ಕೊಳಾರ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X