ಮೈಸೂರು | ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿ : ಡಾ ರವಿಕುಮಾರ್

Date:

Advertisements

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ, ಅಣ್ಣೂರು ಗ್ರಾಮ ವ್ಯಾಪ್ತಿಯ ಚಕ್ಕೊಡನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಚುನಾಯಿತ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲಿ ನಡೆದ ‘ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ‘ ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಧಿಕಾರಿ ಡಾ. ರವಿಕುಮಾರ್ ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡುವಂತೆ ತಿಳಿಸಿದರು.

ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಠಿಕ ಸಮಿತಿಗಳಿಗೆ 2025-26ನೇ ಸಾಲಿನ ಆರ್ಥಿಕ ವರ್ಷದ ಅನುದಾನವನ್ನು ಆರೋಗ್ಯ ಕೇಂದ್ರಗಳ ಎಸ್ ಎನ್ ಎ ಖಾತೆಗೆ ಬಿಡುಗಡೆ ಮಾಡುವ ಹಿನ್ನೆಲೆಯಲ್ಲಿ, ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿಕೊಳ್ಳಲು ತಿಳಿಸಿದರು.

  1. ಗ್ರಾಮ ಆರೋಗ್ಯ ಕುರಿತು ಚರ್ಚಿಸುವುದು ಹಾಗೂ 2025-26ನೇ ಸಾಲಿಗೆ ಸಂಬಂಧಿಸಿದಂತೆ ಗ್ರಾಮಗಳ ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಿ, ತಯಾರಿಸುವುದು.
  2. ದಿನಾಂಕ-1-8-2025 ರಿಂದ-8-8- 2025 ರ ವರೆಗೆ ವಿಶ್ವ ಸ್ತನ ಪಾನ ಕಾರ್ಯಕ್ರಮವನ್ನು ಆಚರಿಸುವುದು.
  3. ವಿಶ್ವಾಸ್ ಆಂದೋಲನದ ವ್ಯಾಪ್ತಿಯಲ್ಲಿ ಕೈ ತೊಳೆಯುವ ವಿಧಾನ ಮತ್ತು ಮಹತ್ವದ ಕುರಿತು ವಿಹೆಚ್ಎಸ್ಎನ್ಸಿ ಸಭೆಗಳಲ್ಲಿ ಅರಿವು ಮೂಡಿಸುವುದು ಹಾಗೂ ಅಣುಕು ಪ್ರದರ್ಶನ ಕೈಗೊಳ್ಳಲು ತಿಳಿಸಿದರು.
  4. 2025-26 ರ ಆರ್ಥಿಕ ವರ್ಷದಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ಸಮುದಾಯ ಮಟ್ಟದಲ್ಲಿ ಅನುಷ್ಠಾನ ಮಾಡುವ ಬಗ್ಗೆ ರೂಪುರೇಷೆಗಳ ಕುರಿತು ಚರ್ಚಿಲು ತಿಳಿಸಲಾಗಿತ್ತು.
  5. ಕುಷ್ಠರೋಗ ಪತ್ತೆ ಹಚ್ಚುವಿಕೆ ಮತ್ತು ನಿರ್ಮೂಲನೆಗೆ ಇರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಗಿತ್ತು.
  6. ಗೃಹ ಆರೋಗ್ಯ ಕಾರ್ಯಕ್ರಮದ ರೂಪುರೇಷೆ, ಸೌಲಭ್ಯ ಮತ್ತು ಸವಲತ್ತುಗಳು ಹಾಗೂ ಕಾರ್ಯಕ್ರಮದ ಅನುಷ್ಠಾನ ಕುರಿತ ಸಭೆಯಲ್ಲಿ ಚರ್ಚಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಲಾಗಿದೆ.
  7. ಕಿಲ್ಕಾರಿ ದೂರವಾಣಿ ಕರೆ ಬಗ್ಗೆ, ಗ್ರಾಮದಲ್ಲಿರುವ ಎಲ್ಲಾ ಗರ್ಭಿಣಿಯರ ನೋಂದಾಯಿತ ಮೊಬೈಲ್ ಫೋನ್ ನಲ್ಲಿ ಕಿಲ್ಕಾರಿ ಸಂಖ್ಯೆಯಾದ 01244451660 ಸೇರ್ಪಡೆ ಮಾಡಿಸುವುದು ಹಾಗೂ ಆ ಕೆರೆಯನ್ನು ಸ್ವೀಕರಿಸಿ ಕನಿಷ್ಠ 3 ನಿಮಿಷಗಳ ಮಾಹಿತಿಯನ್ನು ಕೇಳಿಸಿಕೊಳ್ಳಲು ಪ್ರೇರಿಪಿಸುವುದು. ಪುನ: ಕೇಳಲು ಕಿಲ್ಕಾರಿ ಸಹಾಯವಾಣಿ ಸಂಖ್ಯೆ:1442 ಕರೆ ಮಾಡಲು ತಿಳಿಸುವಂತೆ ಹೇಳಲಾಯಿತು.
  8. ಕ್ಷಯರೋಗ ಬಗ್ಗೆ ಮಾಹಿತಿ ನೀಡಿದರು.
  9. ಸಮುದಾಯ ಮಟ್ಟದಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ಡೆಂಗ್ಯೂ, ಮಲೇರಿಯಾ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರು.
  10. ಗರ್ಭಿಣಿ ಮತ್ತು ಬಾಣಂತಿಯ ಮಹಿಳೆಯರಿಗೆ ಅನೀಮಿಯಾ ಮತ್ತು ಪೌಷ್ಟಿಕ ಆಹಾರ ಬಗ್ಗೆ ಮಾಹಿತಿ ನೀಡದರು.
  11. ಬಾಲ್ಯ ವಿವಾಹ ನಿಷೇಧ, ಭ್ರೂಣ ಹತ್ಯೆಗಳು ಮತ್ತು ಪೋಕ್ಸೋ ಕಾಯ್ದೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
  12. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ ಹಾಗೂ ಸವಲತ್ತು ಮತ್ತು ಸೌಲಭ್ಯಗಳ ಕುರಿತು ಚರ್ಚಿಸಲಾಯಿತು.
  • 11 ವಿಶ್ವ ಮಧ್ಯ ವ್ಯಸನ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮತ್ತು ಮದ್ಯಪಾನ ವ್ಯಸನಿ ಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು.

a) ಅರ್ಹ ಫಲಾನುಭವಿಗಳಿಗೆ ಜೆ.ಎಸ್.ವೈ ಸೌಲಭ್ಯ ಒದಗಿಸಲು ಕ್ರಮ ವಹಿಸುವುದು.

Advertisements

b) ಟಿ.ಬಿ/ಹೆಚ್.ಐ.ವಿ ರೋಗಿಗಳಿಗೆ ಪೌಷ್ಟಿಕ ಆಹಾರಗಳ ಕಿಟ್ ವಿತರಣೆಗೆ ಸಂಬಂಧಿಸಿದಂತೆ (ದಾನಿಗಳಿಂದ) ಕ್ರಮವಹಿಸುವುದು.

c) ತಾಯಿ ಕಾರ್ಡ್ ನಲ್ಲಿ ಆರೋಗ್ಯ ಸೇವೆಗಳ ಎಲ್ಲಾ ಮಾಹಿತಿಗಳು ದಾಖಲೀಕರಣ ಮಾಡಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು.

d) ಎನ್.ಸಿ.ಡಿ ಕಾರ್ಯಕ್ರಮದಡಿಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವುದು. (BP, diabetic, ಇತ್ಯಾದಿ (ವೃದ್ಧಾಪ್ಯದಲ್ಲಿ ಕಂಡುಬರುವ ಸಾಮಾನ್ಯ ಖಾಯಿಲೆಗಳ ಬಗ್ಗೆ ಮಾಹಿತಿ ನೀಡುವುದು)

e) ಪ್ರತಿ ಮಾಹೆ 9ನೇ ತಾರೀಖು ನಡೆಯುವ PMSMA ಮತ್ತು ಪ್ರತಿ ಮಾಹೆ 24ನೇ ತಾರೀಖು ನಡೆಯುವ ePMSMA ಕಾರ್ಯಕ್ರಮದಲ್ಲಿ (ಸಾರ್ವತ್ರಿಕ ರಜೆಗಳ ಬದಲಾಗಿ ಸರ್ಕಾರ ನಿಗಧಿ ಪಡಿಸಿದ ದಿನದಂದು) ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಯನ್ನು ಎಲ್ಲ ಸಮುದಾಯ ಆರೋಗ್ಯ ಕೇಂದ್ರ,ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುತ್ತದೆ,ಅದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿಸಿದರು.

f) ಅರ್ಹ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆನ್ನು ಹಾಕಿಸುವಂತೆ ತಿಳಿಸಿದರು.

g) ಅಂಧತ್ವ ಕಾರ್ಯಕ್ರಮದಡಿಯಲ್ಲಿ ಹಿರಿಯ ನಾಗರಿಕರಿಗೆ 40 ವರ್ಷ ಮೇಲ್ಪಟ್ಟವರಿಗೆ ಉಚಿತ ಕನ್ನಡಕ ವಿತರಣೆ. ಮಾಡುತ್ತೇವೆ ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಪಡೆದುಕೊಳ್ಳಿ ಎಂದು ತಿಳಿಸಿದರು.

h) ಪ್ಲೋರೋಸಿಸ್ ಕಾರ್ಯಕ್ರಮದಡಿಯಲ್ಲಿ ಕುಡಿಯುವ ನೀರಿನ ಮಾದರಿ ಸಂಗ್ರಹಣೆ ಮತ್ತು ಪರೀಕ್ಷೆಗೆ ಒಳಪಡಿಸುತ್ತಿದೇವೆ, ಎಂದರು .

I) ಪೋಷಣ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಮನವರಿಕೆ ಮಾಡಿ ಕೊಡಲಾಯಿತು.

J) ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭವಾಗಿರುವ District early intervention centre ಕುರಿತು ಮಾಹಿತಿ ರವಾನೆ ಮಾಡುವುದು ಹಾಗೂ ಇತರೆ ರಾಷ್ಟ್ರೀಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರದ ಯೋಜನೆಗಳು, ಸವಲತ್ತುಗಳು ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಸಾಂಪ್ರದಾಯಿಕ ಚಾಲನೆ

ಸಭೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ, ಅಭಿವೃದ್ಧಿ ಅಧಿಕಾರಿ ರವಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರಾದ ರವಿರಾಜ್ , ಅರ್ಚನಾ, ರೇಖಾ ಆಸೀಮ ಸುಲ್ತಾನ್, ಸಮುದಾಯ ಆರೋಗ್ಯ ಅಧಿಕಾರಿ ಮಾನಸ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X