ಉತ್ತರ ಕನ್ನಡ | ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ; ಅರ್ಜಿ ಆಹ್ವಾನ

Date:

ಉತ್ತರ ಕನ್ನಡ: ತೋಟಗಾರಿಕೆ ಇಲಾಖೆಯ ವತಿಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿರುವ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ಜಿಲ್ಲೆಯ ಅರ್ಹ ರೈತರ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಈ ತರಬೇತಿಯು 2026ರ ಮೇ 2 ರಿಂದ ಪ್ರಾರಂಭವಾಗಿ 2027ರ ಫೆಬ್ರವರಿ 28 ರವರೆಗೆ ನಡೆಯಲಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅರ್ಹತೆ ಮತ್ತು ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣರಾಗಿರಬೇಕು. ಅಭ್ಯರ್ಥಿ ಅಥವಾ ಅವರ ಪೋಷಕರು ಕೃಷಿ ಜಮೀನು ಹೊಂದಿರಬೇಕು ಹಾಗೂ ಈ ಬಗ್ಗೆ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ವಯೋಮಿತಿಗೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಕೇಂದ್ರದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಶಿರಸಿ | ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನ ಜೀವ ಉಳಿಸಿದ ಪಯಾಜ್ (ಪಯ್ಯು) ಚೌಟಿ

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು ಅರ್ಜಿ ನಮೂನೆಗಳನ್ನು ಶಿರಸಿಯ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ ಅಥವಾ ಕಾರವಾರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ರಾಜ್ಯ ವಲಯ) ಕಚೇರಿಯಲ್ಲಿ ಪಡೆಯಬಹುದು.

ಅಲ್ಲದೆ ಇಲಾಖೆಯ ಅಧಿಕೃತ ವೆಬ್‌ಸೈಟ್ horticulturedir.karnataka.gov.in ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 15 ರ ಸಂಜೆ 5.30 ರೊಳಗೆ ಸಂಬಂಧಿಸಿದ ಕಚೇರಿಗಳಿಗೆ ಸಲ್ಲಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಏಪ್ರಿಲ್ 23 ರಂದು ಶಿರಸಿಯ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಸಂದರ್ಶನದ ಆಧಾರದ ಮೇಲೆ ಸಿದ್ಧಪಡಿಸಲಾದ ಅಂತಿಮ ಆಯ್ಕೆ ಪಟ್ಟಿಯನ್ನು ಏಪ್ರಿಲ್ 27 ರಂದು ಪ್ರಕಟಿಸಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...