ಉತ್ತರ ಕನ್ನಡ | ಹೆಣ್ಣುಮಕ್ಕಳ ದುರ್ಬಳಕೆ ಮಾಡುತ್ತಿದ್ದ ಜಾಲದ ಮಾಹಿತಿ‌ ಬಿಚ್ಚಿಟ್ಟು ಯುವಕ ಆತ್ಮಹತ್ಯೆ

Date:

Advertisements

ಹೆಣ್ಣುಮಕ್ಕಳನ್ನು ಆಮಿಷದ ಹೆಸರಿನಲ್ಲಿ ಪುಸಲಾಯಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ, ಸಾಮಾಜಿಕ‌ ಜಾಲತಾಣದಲ್ಲಿ ಕಿರುಕುಳ‌ ನೀಡುತ್ತಿದ್ದ ಜಾಲವನ್ನು ಯುವಕನೊಬ್ಬ ಬಯಲಿಗೆಳೆದಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಘಟನೆ ನಡೆದಿದೆ.

ಮೃತನನ್ನು ಶಿವಮೊಗ್ಗ ಜಿಲ್ಲೆಯ ಬೆನ್ನೂರು ಚಿಕ್ಕತೌಡತ್ತಿ ಗ್ರಾಮದ ಯುವಕ ಸಂತೋಷ್ ಗಣಪತಿ ನಾಯ್ಡು ಎಂದು ಗುರುತಿಸಲಾಗಿದೆ. ಆತ ಆತ್ಮಹತ್ಯೆಗೂ ಮುನ್ನ ಯುವತಿಯನ್ನು ದುರ್ಬಳಕೆ ಮಾಡುತ್ತಿದ್ದ ಜಾಲದ ಬಗ್ಗೆ ಆಡಿಯೋ ಮತ್ತು ಪೋಟೋಗಳುಳ್ಳ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಸಿದ್ಧಾಪುರ ಕಾಂಗ್ರೆಸ್ ನಾಯಕರ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾನೆ.

“ಇತ್ತೀಚೆಗೆ, ಹೆಣ್ಣುಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ್ದೆ. ಆ ಕಾರಣಕ್ಕೆ, ಸಿದ್ಧಾಪುರ ತಾಲೂಕಿನ ಚನಮಾಂವದ ಚರಣ್, ಲೋಕೇಶ್, ಮನೋಜ್ ಹಾಗೂ ಇನ್ನೂ ನಾಲ್ವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ. ಜೀವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಸಂತೋಷ್ ಹೇಳಿಕೊಂಡಿದ್ದಾನೆ.

Advertisements

“ತನ್ನ ಪ್ರೇಯಸಿಯನ್ನು ಆ ಜಾಲದಿಂದ ರಕ್ಷಿಸಲು ಫೇಸ್‌ಬುಕ್‌ನಲ್ಲಿ ಯುವತಿಯ ಹೆಸರಿನಲ್ಲಿ‌ ನಕಲಿ‌ ಖಾತೆ ತೆರೆದಿದ್ದೆ. ಅದರ ಮೂಲಕ ಜಾಲವನ್ನು ಪತ್ತೆ ಮಾಡಿದ್ದೆ. ಆದರೆ, ಆ ಜಾಲಕ್ಕೆ ನನ್ನ ಪ್ರೇಯಸಿಯೂ ಬೆಂಬಲವಾಗಿ ನಿಂತಿದ್ದಾಳೆ. ಸಿದ್ಧಾಪುರದ ಕಾಂಗ್ರೆಸ್ ನಾಯಕರೂ ಆರೋಪಿಗಳ ಪರವಾಗಿದ್ದಾರೆ. ನನಗೆ ಇನ್ನೇನು‌ ಬೇಡವಾಗಿದೆ” ಎಂದು ಸಂತೋಷ್ ತನ್ನ‌ ವಿಡಿಯೋದಲ್ಲಿ ಹೇಳಿದ್ದಾನೆ.

ಮೃತ ಸಂತೋಷ್ ತಂದೆ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು‌ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X