ಉತ್ತರ ಕನ್ನಡ | ಅನಂತ ಕುಮಾರ್ ಹೇಳಿಕೆಯಿಂದ ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ: ಕಾಂಗ್ರೆಸ್‌ ಮುಖಂಡ ದೀಪಕ್

Date:

Advertisements

“ವೇದ, ಸಂಸ್ಕೃತಿ‌ ಬಗ್ಗೆ ಮಾತನಾಡುವ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ‌ ಬಗ್ಗೆ ಏಕವಚನ, ಅಸಂವಿಧಾನಿಕವಾಗಿ ಮಾತನಾಡಿದ್ದು, ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ. ಇಂಥ ಜನಪ್ರತಿನಿಧಿಗಳು ಯಾವುದೇ ಪಕ್ಷದಲ್ಲಿ ಇದ್ದರೂ ಆ ಪಕ್ಷಕ್ಕೆ ಮುಜುಗರ” ಎಂದು ಕಾಂಗ್ರೆಸ್ ವಕ್ತಾರ ದೀಪಕ್ ದೊಡ್ಡೂರು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸುಪ್ರಿಯಾ ಹೋಟೆಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

“ಸಂಸದ ಅನಂತ್ ಕುಮಾರ್ ಹೆಗಡೆ ನಾಲಾಯಕ್ಕು ಮನುಷ್ಯ. ಅವರು ರಾಷ್ಟ್ರಮಟ್ಟಕ್ಕೆ ಹೋದ ಬಳಿಕ ಜಿಲ್ಲೆಗೆ ಮಸಿ ಬಳಿಯುವಂತಾಗಿದೆ. ಅಗೌರವ ತೋರಿಸುವಂಥದ್ದು ಸಂಸದರಿಗೆ ಹೊಸತಲ್ಲ. ಜಿಲ್ಲೆಗೆ ಹಿಂದೆ ಪ್ರಧಾನಿಗಳು ಬಂದಾಗಲೂ‌ ಸಮಯ‌ ಕೊಡಲಿಲ್ಲ.‌ ಮೊನ್ನೆ‌ ಮೊನ್ನೆ ಗೂಡಿನಿಂದ ಹೊರ‌ ಬಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಏಕವಚನ‌ ಪದ‌ ಪ್ರಯೋಗ ಮಾಡಿದ್ದಾರೆ. ನಾಲ್ಕೂವರೆ ವರ್ಷ ಜನರಿಗೆ ಧ್ವನಿಯಾಗದೆ ಜನರ ನಕಾರಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನು ಆತ ಬಿಡಬೇಕು. ಈ‌ ಜಿಲ್ಲೆಯ ಜನ ಸಾಕಷ್ಟು ಅವಧಿಯ ತನಕ ಅನಂತರ ಹರಿಕತೆ ಕೇಳಿಯೂ ಆಯಿತು” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಸಿದ್ದರಾಮಯ್ಯ ಬಗ್ಗೆ ಅವಹೇಳನ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ

“ಜನಪ್ರತಿನಿಧಿಗಳಾದವರು ಕೋಮು ಸೌಹಾರ್ದತೆ ಹೊಂದಿರಬೇಕು. ಆದರೆ, ಅನಂತನ ನಡೆಯಿಂದ ಆತಂಕ ಉಂಟಾಗಿದೆ. ಅನಂತರು ಇತಿಹಾಸಕಾರರು, ಸಾಹಿತ್ಯಕ್ಕೆ ಮಹತ್ವ ಕೊಟ್ಟರೆ ಹೆಚ್ಚಿನ ಹೆಸರು ಅವರಿಗೆ ಬರುತ್ತಿತ್ತು. ಸಂಸದರು ಅಬ್ಬರಿಸುವುದು ಕೋಮು ಸೌಹಾರ್ದ ಕೆಡಿಸಲು ಮಾತ್ರ. ಅಭಿವೃದ್ಧಿ ಬಗ್ಗೆ ಅವರು ಮಾತನಾಡುತ್ತಿಲ್ಲ. ಅಂಕೋಲಾ‌ ಹುಬ್ಬಳ್ಳಿ ರೈಲ್ವೆ, ರಸ್ತೆ ಅಭಿವೃದ್ಧಿಯಾಗಿಲ್ಲ. ವಿಮಾನ ನಿಲ್ದಾಣ ಬಂದಿಲ್ಲ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X