ಉತ್ತರ ಕನ್ನಡ | ಅನಂತ ಕುಮಾರ್ ಹೆಗಡೆಯನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ: ಶ್ಯಾಮರಾಜ್ ಬಿರ್ತಿ

Date:

Advertisements

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಗಾಗ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೊದಲೊಮ್ಮೆ ನಾವು ಬಂದಿರುವುದೇ ಸಂವಿಧಾನ ಬದಲಾವಣೆ ಮಾಡುದಕ್ಕೆ ಎಂದು ಹೇಳಿಕೆ ನೀಡಿದ್ದರು. ಈಗ ಮತ್ತೇ ನಮಗೆ 400 ಸಂಸದರನ್ನು ಕೊಡಿ ನಾವು ಸಂವಿಧಾನವನ್ನೇ ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಸಂವಿಧಾನದಡಿ ಗೆದ್ದು ಪ್ರಮಾಣ ವಚನ ಸ್ವೀಕರಸಿ ಈಗ ಸಂವಿಧಾನವನ್ನೇ ಬದಲಾಯಿಸುತ್ತೇವೆ, ತಿದ್ದುಪಡಿ ಮಾಡುತ್ತೇವೆ ಎಂದು ಪದೇ ಪದೆ ಬಹಿರಂಗ ಹೇಳಿ ನೀಡಿರುವುದು ದೇಶದ ಅಖಂಡತೆಗೆ ಭಂಗ ತರುವ ಮತ್ತು ಪ್ರಜಾಪ್ರಭುತ್ವ ವಿರೋಧಿ, ದೇಶಧ್ರೋಹದ ಕ್ರತ್ಯವಾಗಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮ ಪತ್ರಿಕಾ ರಂಗವನ್ನು ನಾಯಿಗಳಿಗೆ ಹೋಲಿಸಿರುವುದು ಖಂಡನೀಯ ಎಂದರು. ಬಾಬಾಸಾಹೇಬರು ರಚಿಸಿದ ಸಂವಿಧಾನ ಬಗ್ಗೆ ಕೇವಲವಾಗಿ ಮಾತನಾಡಿದರೆ, ಈ ದೇಶದ ಮೂಲನಿವಾಸಿಗಳಾದ ನಾವು ಸರಿಯಾದ ಮತ್ತು ಮುಟ್ಟಿನೋಡಿಕೊಳ್ಳುವಂತಹ ಪ್ರತಿಕ್ರಿಯೆ ಕೊಡಬೇಕಾಗುತ್ತದೆ ಎಂದು ಖಾರವಾಗಿ ನುಡಿದರು.

Advertisements

ಹೆಗಡೆಯವರೇ ಈ ದೇಶವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾಧಿಸಿಕೊಂಡು ಬಂದ ದೇಶ. ಬಹುತ್ವವನ್ನು ಕಾಪಾಡಿಕೊಂಡು ಬಂದ ದೇಶ. ನಾಲಗೆ ಚಪಲಕ್ಕೆ ಬಾಯಿಗೆ ಬಂದಹಾಗೆ ಸಂವಿಧಾನ ವಿರೋಧಿ ಹೇಳಿಕೆ ನೀಡಿದರೆ ತಕ್ಕ ಉತ್ತರ ಕೊಡಬೇಕಾದಿತು ಎಂದು ಶ್ಯಾಮರಾಜ್ ಬಿರ್ತಿ ಎಚ್ಚರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X