ಉತ್ತರ ಕನ್ನಡ | ಸಚಿವ ಸಂಪುಟ ವಿಸ್ತರಣೆ: ಮಂಕಾಳು ವೈದ್ಯಗೆ ಕೊನೆ ಕ್ಷಣದಲ್ಲಿ ನಿರಾಸೆ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಕೊನೆಯ ಕ್ಷಣದಲ್ಲಿ ಹುಸಿಯಾಗಿದೆ. ಅಂತಿಮವಾಗಿ ಹಿರಿಯ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಈ ಹಂತದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ದೊರೆಯಲಿಲ್ಲ.

- Advertisement -

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ಕಾಂಗ್ರೆಸ್ ವಲಯದಲ್ಲಿ ವಿವಿಧ ಹೆಸರುಗಳು ಚರ್ಚೆಯಾಗುತ್ತಿದ್ದವು. ಅವುಗಳಲ್ಲಿ ಮಂಕಾಳು ವೈದ್ಯ ಅವರ ಹೆಸರೂ ಪ್ರಮುಖವಾಗಿ ಕೇಳಿಬಂದಿತ್ತು. ಆದರೆ ಅಂತಿಮ ಪಟ್ಟಿಯಲ್ಲಿ ಬದಲಾವಣೆ ನಡೆದ ಹಿನ್ನೆಲೆಯಲ್ಲಿ ಅವರಿಗೆ ಅವಕಾಶ ದೊರೆಯಲಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸುದ್ದಿ ಓದಿದ್ದೀರಾ? ಶಿರಸಿ | ಭಾರೀ ಮಳೆಗೆ ನಗರ ಜಲಾವೃತ; ಕೋಟೆಕೆರೆ ಉಕ್ಕಿ ಹರಿದು ಜನಜೀವನ ಅಸ್ತವ್ಯಸ್ತ

ಉತ್ತರ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್‌ನ ಆರ್.ವಿ. ದೇಶಪಾಂಡೆ, ಮಂಕಾಳು ವೈದ್ಯ ಹಾಗೂ ಸತೀಶ್ ಸೈಲ್ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದರು. ಅಂತಿಮ ಹಂತದಲ್ಲಿ ದೇಶಪಾಂಡೆ ಮತ್ತು ಮಂಕಾಳು ವೈದ್ಯ ಅವರ ಹೆಸರುಗಳು ಹೆಚ್ಚು ಚರ್ಚೆಯಲ್ಲಿದ್ದವು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು.

ಮೀನುಗಾರ ಸಮುದಾಯದ ಪ್ರತಿನಿಧಿಯಾಗಿ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಅವರ ಬೆಂಬಲಿಗರಲ್ಲಿ ಮೂಡಿತ್ತು. ಆದರೆ ಕೊನೆಯ ಕ್ಷಣದಲ್ಲಿ ನಡೆದ ಬದಲಾವಣೆಯೊಂದಿಗೆ ದಾವಣಗೆರೆ ಉತ್ತರ ಕ್ಷೇತ್ರದ ಹಿರಿಯ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಈ ಬೆಳವಣಿಗೆಯಿಂದ ಮಂಕಾಳು ವೈದ್ಯ ಅವರ ಬೆಂಬಲಿಗರಲ್ಲಿ ನಿರಾಸೆ ಮನೆ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಈ ಬಾರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಾತಿನಿಧ್ಯ ಸಿಗದಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಚಿವ ಸಂಪುಟ ವಿಸ್ತರಣೆಯ ಅಂತಿಮ ಪಟ್ಟಿಯಲ್ಲಿ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರು ಪ್ರಕಟವಾಗುತ್ತಿದ್ದಂತೆಯೇ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಗೆ ತೆರೆ ಬಿದ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...