ಉ. ಕನ್ನಡ | ಮೂಲ ಸೌಕರ್ಯಗಳಿಂದ ವಂಚಿತಗೊಂಡಿರುವ ಗೌಳಿ ದಡ್ಡಿಯ ಕುಟುಂಬಗಳು: ಪರಿಹಾರ ಯಾವಾಗ?

Date:

Advertisements

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿ ವಾಸವಿರುವ ಗೌಳಿ ಸಮುದಾಯದ 32 ಕುಟುಂಬಗಳು ಹಲವು ವರ್ಷಗಳಿಂದ ಕಾಡಿನೊಳಗೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ.

ವಿದ್ಯುತ್, ನೀರು, ಶಿಕ್ಷಣ ಮತ್ತು ಆರೋಗ್ಯದಂತಹ ಅಗತ್ಯ ಸೇವೆಗಳು ಇಲ್ಲದಿರುವುದರಿಂದ ಈ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಇವರಿಗೆ ಸರ್ಕಾರದಿಂದ ಬರುವ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಕಾಣಸಿಗುತ್ತವೆ. ಹಾಗೆ ಈ ಮಳೆಗಾಲದಲ್ಲಿ ಅವರ‌ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ‌ ರಸ್ತೆಯಂತೂ ಯಮ‌ಸ್ವರೂಪಿ ಗುಂಡಿಗಳಿಂದ ಕೂಡಿದ್ದು ಮತ್ತು ರಸ್ತೆಗಳು ಡಾಂಬರು ಕಾಣದೆ, ಚರಂಡಿ ಇಲ್ಲದೇ ಕನಿಷ್ಠ ಪಕ್ಷ ನಡೆದಾಡಲು ಕೂಡ ಕಷ್ಟ ಪಡುವಂತಾಗಿದೆ.

ಗ್ರಾಮಕ್ಕೆ ಹೆಸರು ಸೂಚಿಸುವ ಬೋರ್ಡ್ ಕೂಡ ಇಲ್ಲದೇ ಇರುವುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಗ್ರಾಮದ‌‌ಲ್ಲಿ ಒಂದು ಅಂಗನವಾಡಿ ಕೇಂದ್ರ ಹಾಗೂ ಒಂದು ಕಿರಿಯ ಪ್ರಾಥಮಿಕ ಶಾಲೆ ಮಾತ್ರ ಇದೆ. ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಬೇಕೆಂದರೆ ಸುಮಾರು 10 ಕಿ.ಮೀ ನಡೆದುಕೊಂಡು ಹೋಗಬೇಕು ಎನ್ನುತ್ತಾರೆ ಅರ್ಧದಲ್ಲಿಯೇ ವಿದ್ಯಾಭ್ಯಾಸ ನಿಲ್ಲಿಸಿದ ಮಕ್ಕಳ ಪೋಷಕರು.

Advertisements

ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಕೂಡ ಈ‌ ಗ್ರಾಮಕ್ಕೆ ಇಲ್ಲ. ವಿದ್ಯಾರ್ಥಿಗಳು‌‌ ಅಷ್ಟೇ ಅಲ್ಲದೆ ಅನಾರೋಗ್ಯದಿಂದ ಬಳಲುತ್ತಿರುವವರೂ ಕೂಡ ಖಾಸಗಿ ವಾಹನಗಳನ್ನೆ ಅವಲಂಬಿಸುವ ಪರಿಸ್ಥಿತಿ ಇಲ್ಲಿದೆ. ಆದ್ದರಿಂದ ಎಷ್ಟೋ ಮಕ್ಕಳು ಶಾಲೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊಟೇಲ್ ಮತ್ತು ಬೇರೆ ಕಡೆ ದುಡಿಯಲು ಹೋಗುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಈ ಮೊದಲು ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದರೂ ಏನೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಇಲ್ಲಿನ ಗ್ರಾಮದ ನಿವಾಸಿಗಳದ್ದು.

ಆದಷ್ಟು ಬೇಗ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮತ್ತು ರಸ್ತೆ ನಿರ್ಮಾಣ, ಚರಂಡಿ ನಿರ್ಮಿಸಿ ಕೊಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆಗ್ರಹಿಸಿದ್ದಾರೆ.

WhatsApp Image 2025 07 05 at 5.25.24 PM

ಗೌಳಿ ಸಮಾಜದ ಪ್ರತಿನಿಧಿಗಳ ಪ್ರಕಾರ, ಈ ಬಗ್ಗೆ ಅನೇಕ ಬಾರಿ ಜಿಲ್ಲಾ ಆಡಳಿತ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ಸ್ಪಂದನೆ ದೊರೆತಿಲ್ಲ. ಇದರ ವಿರುದ್ಧವಾಗಿ ಗೌಳಿ ಸಮುದಾಯದವರು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣದ ಕ್ರಮವಿಲ್ಲದಿದ್ದರೆ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಾವೇರಿ | ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಸಂಭ್ರಮ!

ಈ ಗ್ರಾಮದ ಸಮಸ್ಯೆಗಳನ್ನು ಪರಿಹರಿಸುವಂತೆ ಗ್ರಾಮದ ಕೆಲವರು ಸೇರಿಕೊಂಡು ಗ್ರಾಮ ಅಭಿವೃದ್ಧಿ ಸಮಿತಿ ರಚಿಸಿಕೊಂಡಿದ್ದಾರೆ. ಅವರೇ ತಮ್ಮ ಗ್ರಾಮದ ಸಮಸ್ಯೆಗಳನ್ನು ಪರಿಹರಿಸಿ ಕೊಡುವಂತೆ ಪ್ರತಿಯೊಂದು ಇಲಾಖೆಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನಾದರೂ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿನ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಪ್ರಯತ್ನಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X