ತಂದೆಯೊಬ್ಬ ಅಂಗ ವೈಕಲ್ಯಕ್ಕೆ ತುತ್ತಾಗಿದ್ದ ಮಗನನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ರ್ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಪ್ರೀತಮ್ ಹರಿಜನ್ (15), ಶ್ರೀಧರ ಹರಿಜನ್ (45) ಮೃತದುರ್ದೈವಿಗಳು. ಪ್ರೀತಮ್ ಹರಿಜನ್ ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರೀತಮ್ ಅನಾರೋಗ್ಯದಿಂದ ಮಾನಸಿಕವಾಗಿ ಆತನ ತಂದೆ ಶ್ರೀಧರ ಕುಗ್ಗಿ ಹೋಗಿದ್ದರು. ಮಾನಸಿಕ ಖಿನ್ನತೆಗೂ ಒಳಗಾಗಿದ್ದರು.
ಕುಮಟಾದ ಪೌರಕಾರ್ಮಿಕರ ವಸತಿ ಸಂಕೀರ್ಣದಲ್ಲಿ ಮಗನನ್ನು ಶ್ರೀಧರ್ ಹತ್ಯೆ ಮಾಡಿದ್ದು, ಬಳಿಕ ಮಾಳಿಗೆಗೆ ತೆರಳಿ ನೇಣು ಬಿಗಿದುಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಾಸಕ ಪ್ರದೀಪ್ ಈಶ್ವರ್ಗೆ ಮಾತೃ ವಿಯೋಗ
ಕುಮಟಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ತಿಳಿದುಬಂದಿದೆ.