ಉತ್ತರ ಕನ್ನಡ| ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡುವುದು ಕಡ್ಡಾಯ ; ತಪ್ಪಿದರೆ ಆಸ್ಪತ್ರೆಗಳಿಗೆ ₹1 ಲಕ್ಷ ದಂಡ ರಾಜ್ಯ ಸರ್ಕಾರದ ಮಹತ್ವದ ಆದೇಶ

Date:

ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ ತುರ್ತು ಸಂದರ್ಭದಲ್ಲಿಯೂ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಬೇಡಿಕೆ ಇಡದೆ, ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. 

- Advertisement -

ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಪ್ರತಿಯೊಂದು ಆಸ್ಪತ್ರೆ ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ ಒದಗಿಸಬೇಕು. ಸೌಲಭ್ಯಗಳ ಕೊರತೆಯಿರುವ ಆಸ್ಪತ್ರೆಗಳು, ರೋಗಿಯನ್ನು ಇತರೆ ಆಸ್ಪತ್ರೆಗಳಿಗೆ ವರ್ಗಾವಣೆ ಮಾಡುವ ಮೊದಲು ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ವಿವರಗಳೊಂದಿಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ.? https://eedina.com/editorials/eedina-editorial-rv-deshpande-misbehavior-havent-they-gained-wisdom-even-with-age/2025-09-04/

ರಸ್ತೆ ಅಪಘಾತದ ಸಂತ್ರಸ್ತರು, ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ₹1.50 ಲಕ್ಷದವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ರಾಜ್ಯ ರಸ್ತೆ ಸುರಕ್ಷತಾ ಮಂಡಳಿಯು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದ್ದು, ಮೋಟಾರು ವಾಹನ ಅಪಘಾತ ನಿಧಿಯಿಂದ ಮರುಪಾವತಿ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...