ಉತ್ತರ ಕನ್ನಡ | ಭಾರೀ ಮಳೆ; ತೆಪ್ಪದಲ್ಲಿ ಆಸ್ಪತ್ರೆಗೆ ರೋಗಿಗಳ ರವಾನೆ

Date:

Advertisements

ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಲವಾರು ಗ್ರಾಮಗಳು ಜಲಾವೃತಗೊಂಡಿದ್ದು, ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳಿಗೆ ವಾಹನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ಕುಂದಾಲ್ ಗ್ರಾಮದಲ್ಲಿ ಉಸಿರಾಟದ ತೊಂದರೆಯ ಕಾಯಿಲೆಗೆ ತುತ್ತಾಗಿದ್ದ ಇಬ್ಬರು ವ್ಯಕ್ತಿಗಳನ್ನು ತೆಪ್ಪದಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕನೇರಿ ಜಲಾಶಯದ ಹಿನ್ನೀರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ಕುಂದಾಲ್ ಗ್ರಾಮದ ಬಳಿ ಸೇತುವೆಯೂ ಮುಳುಗಡೆಯಾಗಿದೆ. ಪರಿಣಾಮ ಗ್ರಾಮಸ್ಥರಿಗೆ ರಸ್ತೆ ಸಂಪರ್ಕವಿಲ್ಲದಂತಾಗಿದೆ.

ಗ್ರಾಮ ರಸ್ತೆ ಸಂಪರ್ಕ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ಬಸವರಾಜ ಚಿನ್ನಳ್ಳಿ ಮತ್ತು ಕಂದಾಯ ನಿರೀಕ್ಷಕ ಗಣಪತಿ ಮೇತ್ರಿ, ಆ ಇಬ್ಬರು ರೋಗಿಗಳ ರಕ್ಷಣೆಗಾಗಿ ರಕ್ಷಣಾ ತಂಡವನ್ನು ಕಳಿಸಿದ್ದಾರೆ.

Advertisements

ಬೋಟ್‌ ಮೂಲಕ ಗ್ರಾಮದಿಂದ ರೋಗಿಗಳನ್ನು ಕರೆತರಲಾಗಿದೆ. ಬಳಿಕ, ಸುರಕ್ಷಿತ ಸ್ಥಳದಲ್ಲಿ ಆಂಬ್ಯುಲೆನ್ಸ್‌ಗೆ ಹತ್ತಿಸಿ, ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕುಂದಾಲ್ ಗ್ರಾಮ ಮಾತ್ರವಲ್ಲದೆ, ಸುತ್ತಮುತ್ತಲ ಕುರವಳಿ, ನಾವರ, ಅಂಬಲಿ, ಕತೇಲಿ ಸೇರಿದಂತೆ ಹಲವಾರು ಗ್ರಾಮಗಳು ರಸ್ತೆ ಸಂಪರ್ಕ ಕಳೆದುಕೊಂಡಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X