ಉತ್ತರ ಕನ್ನಡ | ಭಾರೀ ಮಳೆಗೆ ಗುಡ್ಡ ಕುಸಿತ: 6 ಸಾವು

Date:

Advertisements

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವು ಭಾಗಗಳಲ್ಲಿ ಗುಡ್ಡು ಕುಸಿದಿದ್ದರೆ, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನ ಬಳಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಗುಡ್ಡ ಕುಸಿದಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದು, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಶಿರೂರಿನ ಬಳಿ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡವನ್ನು ಅಗೆಯಲಾಗಿತ್ತು. ಗುಡ್ಡದ ಉಳಿದ ಭಾಗ ಸಡಿಲಗೊಂಡಿದ್ದರಿಂದ, ಭಾರೀ ಮಳೆಗೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು,  11 ಜನ ನಾಪತ್ತೆಯಾಗಿದ್ದಾರೆ. ಹಲವಾರು ವಾಹನಗಳು ಗಂಗಾವಳಿ ನದಿಗೆ ಉರುಳಿ ಬಿದ್ದಿವೆ ಎಂದು ವರದಿಯಾಗಿದೆ.

ಮೃತರನ್ನು ಹೆದ್ದಾರಿ ಪಕ್ಕದಲ್ಲಿ ಚಹಾ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕ (47), ಅವರ ಪತ್ನಿ ಶಾಂತಿ (36), ಮಗ ರೋಶನ್ (11), ಪುತ್ರಿ ಅವಂತಿಕಾ (6), ಸಂಬಂಧಿ ಉಪೇಂದ್ರ (50) ಎಂದು ಗುರುತಿಸಲಾಗಿದೆ.

Advertisements

ಹಲವರು ಗುಡ್ಡ ಕುಸಿದ ಮಣ್ಣಿನಲ್ಲಿ ಸಿಲುಕಿದ್ದು, ಅವರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ (ಎನ್‌ಡಿಆರ್‌ಎಫ್) ತಂಡವು ರಕ್ಷಿಸಿದೆ. ಹೆದ್ದಾರಿಯ ಮೇಲೆ ಬಿದ್ದಿದ್ದ ಮಣ್ಣಿನ ರಾಶಿ ತೆರವುಗೊಳಿಸಲು 12ಕ್ಕೂ ಹೆಚ್ಚು ಜೆಸಿಬಿ ಕಾರ್ಯಾಚರಣೆ ನಡೆಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X