ಉತ್ತರ ಕನ್ನಡ | ನಿಷೇಧವಿದ್ದರೂ ಹೆಚ್ಚಿದ ಬೆಳಕಿನ ಮೀನುಗಾರಿಕೆ

Date:

Advertisements

ಬೆಳಕಿನ ಮೀನುಗಾರಿಕೆ ಅವೈಜ್ಞಾನಿಕ ಪದ್ಧತಿ ಎಂಬ ಕಾರಣಕ್ಕೆ ನಿಷೇಧಿಸಲಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕದ್ದುಮುಚ್ಚಿ ನಡೆಸಲಾಗುತ್ತಿದ್ದ ಬೆಳಕಿನ ಮೀನುಗಾರಿಕೆ ಇದೀಗ ಮುಕ್ತವಾಗಿ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೈತಕೋಲದ ಬಂದರಿನಲ್ಲಿ ಬೆಳಕಿನ ಮೀನುಗಾರಿಕೆ ನಡೆಸಿ ದಡಕ್ಕೆ ಮರಳಿದ ಬೋಟ್‌ವೊಂದರ ದೃಶ್ಯಗಳನ್ನು  ಮೀನುಗಾರರೊಬ್ಬರು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ನಿತ್ಯ ಹಲವು ಬೋಟ್‍ಗಳು ಜಿಲ್ಲೆಯ ವ್ಯಾಪ್ತಿಯಲ್ಲಿ ಬೆಳಕಿನ ಮೀನುಗಾರಿಕೆ ನಡೆಸುತ್ತಿವೆ ಎಂದು ಅವರು ದೂರಿದ್ದಾರೆ.

ಜಿಲ್ಲೆಯ ಹತ್ತಾರು ಪರ್ಸಿನ್ ಬೋಟ್‍ಗಳು ನಿರಾತಂಕವಾಗಿ ಆಳಸಮುದ್ರದಲ್ಲಿ ಬೆಳಕಿನ ಮೀನುಗಾರಿಕೆ ನಡೆಸುತ್ತಿವೆ ಎಂದು ಸಾಂಪ್ರದಾಯಿಕ ಮೀನುಗಾರರು ಆರೋಪಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಬೆಳಕಿನ ಮೀನುಗಾರಿಕೆ ನಡೆಸುವ ಬೋಟುಗಳನ್ನು ಪತ್ತೆ ಹಚ್ಚಿ ಹಿಡಿದುಕೊಡುವ ಕೆಲಸವನ್ನು ಮೀನುಗಾರರೇ ಮಾಡಿದ್ದರು.

Advertisements

ಆದರೆ, ಈ ಬಾರಿ ಹಲವು ಬೋಟುಗಳ ನಿಷೇಧಿತ ಪದ್ಧತಿ ಮೂಲಕ ಮೀನುಗಾರಿಕೆ ನಡೆಸುತ್ತಿದ್ದರು ದೂರು ನೀಡಲು ಯಾರು ಮುಂದೆ ಬರುತ್ತಿಲ್ಲ. ಬೈತಕೋಲ, ಹೊನ್ನಾವರ, ಭಟ್ಕಳ ಭಾಗದಲ್ಲಿ ಹಲವು ಪರ್ಸಿನ್ ಬೋಟುಗಳು ಬೆಳಕಿನ ಮೀನುಗಾರಿಕೆಯಲ್ಲಿ ತೊಡಗಿಕೊಂಡಿವೆ ಎಂದು ಮೀನುಗಾರರು ದೂರುತ್ತಿದ್ದಾರೆ.

‘ಆಳಸಮುದ್ರದಲ್ಲಿ 250 ಕೆ.ವಿ ಸಾಮರ್ಥ್ಯದ ಜನರೇಟರ್, 12 ಎಲ್‌ಇಡಿ ಬಲ್ಬ್ ಬಳಸಿ ರಾತ್ರಿ ವೇಳೆ ಪ್ರಖರ ಬೆಳಕು ಬೀರಲಾಗುತ್ತದೆ. ಬೆಳಕಿಗೆ ಗುಂಪುಗೂಡುವ ಮೀನನ್ನು ಸಣ್ಣ ಗಾತ್ರದ ಬಲೆ ಬೀಸಿ ಹಿಡಿಯಲಾಗುತ್ತದೆ. ನಿಷೇಧಿತ ಪದ್ಧತಿಯಲ್ಲಿ ಮೀನುಗಾರಿಕೆ ನಡೆಸುತ್ತಿರುವವರನ್ನು ನಿಯಂತ್ರಿಸಲು ಮೀನುಗಾರಿಕೆ ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಪ್ರಭಾವಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಪರ್ಸಿನ್ ಬೋಟುಗಳನ್ನು ನಡೆಸುತ್ತಿದ್ದು ಅವರೇ ಈ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಇಲ್ಲಿನ ಬೋಟ್ ಮಾಲೀಕರೊಬ್ಬರು ಆರೋಪಿಸುತ್ತಿದ್ದಾರೆ.

ಮೀನಿನ ಸಂತತಿಗೆ ಬೆಳಕಿನ ಮೀನುಗಾರಿಕೆ ಹಾನಿ ಉಂಟುಮಾಡುತ್ತದೆ ಎಂದು ನಿಷೇಧಿಸಲಾಗಿದೆ. ಮೀನಿನ ಕೊರತೆಯಿಂದ ಬೈತಕೋಲದ 75ಕ್ಕೂ ಹೆಚ್ಚು ಟ್ರಾಲರ್ ಬೋಟುಗಳು ಸಮುದ್ರಕ್ಕೆ ಇಳಿಯದಂತ ಸ್ಥಿತಿ ಇದೆ. ಮೀನು ಕೊರತೆ ಉಂಟುಮಾಡುವ ಚಟುವಟಿಕೆ ಹೆಚ್ಚುತ್ತಿರುವುದು ಕಳವಳಕಾರಿ ಎಂದು ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ಮಾದ್ಯಮದೆದುರು ತಮ್ಮ ಬೇಸರ ಹೊರಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X