ಉತ್ತರ ಕನ್ನಡ | ಸುಳ್ಳು ಪ್ರಚಾರ ಮಾಡಿ JSW ಕಂಪನಿ ಜನರ ದಾರಿತಪ್ಪಿಸುತ್ತಿದೆ: ಸಂಜೀವ ಬಲೆಗಾರ

Date:

Advertisements

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಪರಿಸರ ಪರಿಶೀಲನೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆ ನಡೆಯುವ ಮುನ್ನವೇ ಬಂದರು ಸ್ಥಾಪನೆಯಾದರೆ ಜಿಲ್ಲೆ ಹಾಗೂ ಬಂದರು ಪ್ರದೇಶದಲ್ಲಿ ಹೆಚ್ಚು ಉಪಯೋಗಗಳಿವೆ ಎಂದು ಸುಳ್ಳು ಪ್ರಚಾರ ಮಾಡಿ JSW ಕಂಪನಿಯು ಜನರ ದಾರಿ ತಪ್ಪಿಸುತ್ತಿದೆ ಎಂದು ಕೇಣಿ ವಾಣಿಜ್ಯ ಬಂದರು ಹೊರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಸಂಜೀವ ಬಲೆಗಾರ ಆರೋಪಿಸಿದರು.

ವಾಣಿಜ್ಯ ಬಂದರು ಸ್ಥಾಪನೆಯಿಂದ ಸ್ಥಳೀಯ ಮೀನುಗಾರರಿಗೆ ಅನುಕೂಲ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಮ್ಮ ಜಿಲ್ಲೆಯವರೇ ಅಲ್ಲದವರು ಹೇಳುತ್ತಿದ್ದಾರೆ. ಅದನ್ನು ದಾಖಲಿಸುತ್ತಾ ವ್ಯಾಪಕ ಸುಳ್ಳಿನ ಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.

“ಜಿಲ್ಲೆಯ ಹಾಗೂ ಕೇಣಿ ಪ್ರದೇಶದ ಅಭಿವೃದ್ಧಿ ವಿರೋಧಿಗಳೇನೂ ಅಲ್ಲ. ಆದರೆ, ಜನರನ್ನು ನಿರಾಶ್ರಿತರನ್ನಾಗಿ ಮಾಡಿ ನೈಸರ್ಗಿಕ ಸಂಪನ್ಮೂಲಗಳನ್ನು ನಾಶ ಮಾಡುವ ಇಂತಹ ಯೋಜನೆಗೆ ನಮ್ಮ ವಿರೋಧವಿದೆ. ಮಂಗಳೂರು ಹಾಗೂ ಗೋವಾಗಳ‌ ಅಭಿವೃದ್ದಿಗೆ ಬಂದರು ಸ್ಥಾಪನೆ ಕಾರಣ ಎಂದು ಕಂಪನಿ ಹೇಳಿಕೊಂಡಿದೆ. ಆದರೆ, ಬಂದರು ಸ್ಥಾಪನೆಯಿಂದ ಅಲ್ಲಿ ಆಗುತ್ತಿರುವ ಮಾಲಿನ್ಯದ ಬಗ್ಗೆ ಏಕೆ ಹೇಳುತ್ತಿಲ್ಲ?” ಎಂದು ಪ್ರಶ್ನಿಸಿದರು.

Advertisements

“ಜಿಲ್ಲೆಯಲ್ಲಿ ಈಗ ಇರುವ ಬಂದರುಗಳಲ್ಲಿ ವಹಿವಾಟು ನಡೆಯುತ್ತಿಲ್ಲ. ಇದೇ ಸಂದರ್ಭದಲ್ಲಿ ಹೊಸ ಬಂದರು ಸ್ಥಾಪನೆ ಅವಶ್ಯಕತೆ ಇದೆಯೇ ಎಂದು ಪ್ರಶ್ನಿಸಿರುವ ಅವರು, ಇದು ಕೇವಲ ಮೀನುಗಾರರ ಹೋರಾಟ ಅಲ್ಲಾ ಬೇಲೆಕೇರಿ ಮತ್ತು ಬಾವಿಕೇರಿ ರೈತರು ಕೂಡ ತಮ್ಮ ಕೃಷಿ ಭೂಮಿ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿ ಕೂಡ ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲ. ಹೀಗೆ ಮಾಡಿದರೆ ನಾವು ಕೂಡ ಮುಂದಿನ ದಿನಗಳಲ್ಲಿ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಅಧಿಕಾರಿಗಳಿಂದಲೇ ನೀರಿನ ಪೈಪ್ ಕಳ್ಳತನ

“ಯೋಜನೆ ವಿರೋಧಿಸುವವರಿಗೆ ಕಂಪನಿ ಏನೇ ಆಮಿಷವೊಡ್ಡಿದರೂ ನಾವು ಯಾವುದಕ್ಕೂ ಬಲಿಯಾಗುವುದಿಲ್ಲ. ಯೋಜನೆ ವಿರುದ್ಧ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ” ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಹುವಾ ಖಂಡೇಕರ, ವೆಂಕಟೇಶ ದುರ್ಗೆಕರ, ಮಂಜುನಾಥ ಠಾಕೇಕರ, ಚಂದ್ರಕಾಂತ ಪಿರಣಕರ್, ಮಧ್ವರಾಜ್, ನಿಲೇಶ ಹರಿಕಂತ್ರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X