ಉತ್ತರ ಕನ್ನಡ | ಸುಳ್ಳು ಪ್ರಚಾರ ಮಾಡಿ JSW ಕಂಪನಿ ಜನರ ದಾರಿತಪ್ಪಿಸುತ್ತಿದೆ: ಸಂಜೀವ ಬಲೆಗಾರ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಪರಿಸರ ಪರಿಶೀಲನೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆ ನಡೆಯುವ ಮುನ್ನವೇ ಬಂದರು ಸ್ಥಾಪನೆಯಾದರೆ ಜಿಲ್ಲೆ ಹಾಗೂ ಬಂದರು ಪ್ರದೇಶದಲ್ಲಿ ಹೆಚ್ಚು ಉಪಯೋಗಗಳಿವೆ ಎಂದು ಸುಳ್ಳು ಪ್ರಚಾರ ಮಾಡಿ JSW ಕಂಪನಿಯು ಜನರ ದಾರಿ ತಪ್ಪಿಸುತ್ತಿದೆ ಎಂದು ಕೇಣಿ ವಾಣಿಜ್ಯ ಬಂದರು ಹೊರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಸಂಜೀವ ಬಲೆಗಾರ ಆರೋಪಿಸಿದರು.

- Advertisement -

ವಾಣಿಜ್ಯ ಬಂದರು ಸ್ಥಾಪನೆಯಿಂದ ಸ್ಥಳೀಯ ಮೀನುಗಾರರಿಗೆ ಅನುಕೂಲ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಮ್ಮ ಜಿಲ್ಲೆಯವರೇ ಅಲ್ಲದವರು ಹೇಳುತ್ತಿದ್ದಾರೆ. ಅದನ್ನು ದಾಖಲಿಸುತ್ತಾ ವ್ಯಾಪಕ ಸುಳ್ಳಿನ ಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಜಿಲ್ಲೆಯ ಹಾಗೂ ಕೇಣಿ ಪ್ರದೇಶದ ಅಭಿವೃದ್ಧಿ ವಿರೋಧಿಗಳೇನೂ ಅಲ್ಲ. ಆದರೆ, ಜನರನ್ನು ನಿರಾಶ್ರಿತರನ್ನಾಗಿ ಮಾಡಿ ನೈಸರ್ಗಿಕ ಸಂಪನ್ಮೂಲಗಳನ್ನು ನಾಶ ಮಾಡುವ ಇಂತಹ ಯೋಜನೆಗೆ ನಮ್ಮ ವಿರೋಧವಿದೆ. ಮಂಗಳೂರು ಹಾಗೂ ಗೋವಾಗಳ‌ ಅಭಿವೃದ್ದಿಗೆ ಬಂದರು ಸ್ಥಾಪನೆ ಕಾರಣ ಎಂದು ಕಂಪನಿ ಹೇಳಿಕೊಂಡಿದೆ. ಆದರೆ, ಬಂದರು ಸ್ಥಾಪನೆಯಿಂದ ಅಲ್ಲಿ ಆಗುತ್ತಿರುವ ಮಾಲಿನ್ಯದ ಬಗ್ಗೆ ಏಕೆ ಹೇಳುತ್ತಿಲ್ಲ?” ಎಂದು ಪ್ರಶ್ನಿಸಿದರು.

“ಜಿಲ್ಲೆಯಲ್ಲಿ ಈಗ ಇರುವ ಬಂದರುಗಳಲ್ಲಿ ವಹಿವಾಟು ನಡೆಯುತ್ತಿಲ್ಲ. ಇದೇ ಸಂದರ್ಭದಲ್ಲಿ ಹೊಸ ಬಂದರು ಸ್ಥಾಪನೆ ಅವಶ್ಯಕತೆ ಇದೆಯೇ ಎಂದು ಪ್ರಶ್ನಿಸಿರುವ ಅವರು, ಇದು ಕೇವಲ ಮೀನುಗಾರರ ಹೋರಾಟ ಅಲ್ಲಾ ಬೇಲೆಕೇರಿ ಮತ್ತು ಬಾವಿಕೇರಿ ರೈತರು ಕೂಡ ತಮ್ಮ ಕೃಷಿ ಭೂಮಿ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿ ಕೂಡ ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲ. ಹೀಗೆ ಮಾಡಿದರೆ ನಾವು ಕೂಡ ಮುಂದಿನ ದಿನಗಳಲ್ಲಿ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಅಧಿಕಾರಿಗಳಿಂದಲೇ ನೀರಿನ ಪೈಪ್ ಕಳ್ಳತನ

“ಯೋಜನೆ ವಿರೋಧಿಸುವವರಿಗೆ ಕಂಪನಿ ಏನೇ ಆಮಿಷವೊಡ್ಡಿದರೂ ನಾವು ಯಾವುದಕ್ಕೂ ಬಲಿಯಾಗುವುದಿಲ್ಲ. ಯೋಜನೆ ವಿರುದ್ಧ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ” ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಹುವಾ ಖಂಡೇಕರ, ವೆಂಕಟೇಶ ದುರ್ಗೆಕರ, ಮಂಜುನಾಥ ಠಾಕೇಕರ, ಚಂದ್ರಕಾಂತ ಪಿರಣಕರ್, ಮಧ್ವರಾಜ್, ನಿಲೇಶ ಹರಿಕಂತ್ರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...