ಉತ್ತರ ಕನ್ನಡ | ನಿರ್ವಹಣೆ ಕೊರತೆ; ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್, ಸಾರ್ವಜನಿಕರ ಆಕ್ರೋಶ

Date:

Advertisements

ಕಾರವಾರದಿಂದ ದೇವಳಮಕ್ಕಿ, ಶಿರ್ವೆಗೆ ಸಂಚರಿಸುವ ಸರ್ಕಾರಿ ಬಸ್ ಗುರುವಾರ ಏಕಾಏಕಿ ಹಳ್ಳಕ್ಕೆ ಇಳಿದು ನಿಂತಿದೆ. ಆದರೆ ಬಸ್‌ನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಹಳೆಯ ಬಸ್ಸುಗಳ ದುರಸ್ತಿ ಮತ್ತು ನಿರ್ವಹಣೆಗೆ ಆಗ್ರಹಿಸಿದ್ದಾರೆ.

ದೇವರಮಕ್ಕಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಗೌಡ ಅವರು ಸುಸ್ಥಿತಿಯಲ್ಲಿರುವ ಬಸ್ ಒದಗಿಸುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿದ್ದಾರೆ. ದೇವಳಮಕ್ಕಿ ಭಾಗದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಸಂಚಾರಕ್ಕೆ ಈ ಬಸ್ ಅನುಕೂಲಕರವಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಬಸ್ ಆಗಾಗ್ಗೆ ಕೆಟ್ಟು ನಿಲ್ಲುತ್ತಿತ್ತು ಮತ್ತು ತಾಂತ್ರಿಕ ದೋಷಗಳು ಸಾಮಾನ್ಯವಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ಗುರುವಾರವೂ ತಾಂತ್ರಿಕ ದೋಷದಿಂದ ಬಸ್ ಹಳ್ಳಕ್ಕೆ ಇಳಿದು ನಿಂತಿತು. ಘಟನೆಯ ನಂತರ ಹಳ್ಳಕ್ಕೆ ಇಳಿದ ಬಸ್‌ನಿಂದ ವಿದ್ಯಾರ್ಥಿಗಳನ್ನು ಬೇರೆ ಬಸ್‌ಗೆ ಸ್ಥಳಾಂತರಿಸಲಾಯಿತು. ಆದರೆ, ವಿದ್ಯಾರ್ಥಿಗಳು ಆ ಬಸ್‌ನಲ್ಲಿ ಕರೆದೊಯ್ಯಲು ನಿರಾಕರಿಸಿದ ಕಾರಣ, ನಂತರ ದೇವಳಮಕ್ಕಿಗೆ ರೂಪಾಲಿ ಎಸ್. ನಾಯ್ಕ್ ಅವರು ನೀಡಿದ ಆಂಬುಲೆನ್ಸ್‌ನಲ್ಲಿ ವಿದ್ಯಾರ್ಥಿಗಳು ತೆರಳಬೇಕಾಯಿತು.

Advertisements

ಇದನ್ನೂ ಓದಿ: ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಸುಸ್ಥಿತಿಯಲ್ಲಿರುವ ಬಸ್ ಒದಗಿಸುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸುಸ್ಥಿತಿಯಲ್ಲಿರುವ ಬಸ್ ಅನ್ನು ನಿಗದಿತ ಸಮಯಕ್ಕೆ ಸರಿಯಾಗಿ ಓಡಿಸುವಂತೆ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X