ಉತ್ತರ ಕನ್ನಡ | ಡಿಆರ್‌ಎಫ್‌ಒ ಹುದ್ದೆಗಳನ್ನು ಮುಂಬಡ್ತಿ ಹುದ್ದೆಯಾಗಿಸಲು ಶಿಫಾರಸು; ಅರಣ್ಯ ಪದವಿಧರರ ವಿರೋಧ

Date:

Advertisements

ಡಿಆರ್‌ಎಫ್‌ಒ ಹುದ್ದೆಗೆ ಸದ್ಯ ಇರುವ ಶೇ.50ರಷ್ಟು ಮುಂಬಡ್ತಿ ಮತ್ತು ಶೇ.50ರಷ್ಟು ನೇರ ನೇಮಕಾತಿ ರದ್ದುಪಡಿಸಿ ಶೇ.100ರಷ್ಟು ಹುದ್ದೆಗಳನ್ನು ಮುಂಬಡ್ತಿ ಹುದ್ದೆಯನ್ನಾಗಿ ಪರಿವರ್ತಿಸಲು ಸಲ್ಲಿಸಿದ್ದ ಶಿಫಾರಸು ಅನುಮೋದನೆ ಹಂತದಲ್ಲಿದ್ದು ಇದಕ್ಕೆ ಅರಣ್ಯ ಪದವೀಧರರು ಮತ್ತು ಪದವಿ ವಿದ್ಯಾರ್ಥಿಗಳ ತೀವ್ರ ವಿರೋಧ ವ್ಯಕ್ತವಾಗಿದೆ.

ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್ಒ) ಹುದ್ದೆಗಳನ್ನು ಮುಂಬಡ್ತಿ ಹುದ್ದೆಯನ್ನಾಗಿ ಪರಿವರ್ತಿಸಲು, ಸರ್ಕಾರದ ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸರ್ಕಾರಕ್ಕೆ ಶಿಫಾರಸು ವರದಿ ನೀಡಿದ್ದರು. ವರದಿ ಅರಣ್ಯ ಇಲಾಖೆಯ ಅನುಮೋದನೆ ಹಂತದಲ್ಲಿದ್ದು, ಅರಣ್ಯ ಪದವೀಧರರನ್ನು ಕಂಗೆಡಿಸಿದೆ.

ಒಬ್ಬ ಅರಣ್ಯ ಪದವೀಧರನನ್ನು ರೂಪಿಸಲು 6 ಲಕ್ಷ ರೂ. ವ್ಯಯವಾಗುತ್ತದೆ. ತಜ್ಞ ಅರಣ್ಯಾಧಿಕಾರಿ ಆಗಲು ಅರ್ಹರಿರುವಂತೆ ರೂಪಿಸಲಾಗುತ್ತದೆ. ಈಗಾಗಲೇ 1,500 ಅರಣ್ಯ ಪದವೀಧರರು ಡಿಆರ್‌ಎಫ್‌ಒ ಹುದ್ದೆ ಪಡೆಯಲು ಅರ್ಹರಿದ್ದರೂ ಅವಕಾಶಗಳಿಂದ ವಂಚಿತರಾಗಿದ್ದಾರೆ. ಆದರೆ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳಲ್ಲಿ ಆಯಾ ವಿಷಯದ ಪದವೀಧರರನ್ನೆ ತಮ್ಮ ಇಲಾಖೆ ಹುದ್ದೆಗಳಿಗೆ ನೇಮಿಸಲಾಗುತ್ತದೆ ಎಂದು ಕರ್ನಾಟಕ ಅರಣ್ಯ ಪದವೀಧರರ ಮತ್ತು ವಿದ್ಯಾರ್ಥಿಗಳ ಸಂಘಟನೆಯ ಅಧ್ಯಕ್ಷ ಯಶಸ್ ಟಿ.ಎನ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

Advertisements

ನೇಮಕಾತಿ ಮೀಸಲಾತಿಯಲ್ಲಿ ಕಡಿತಮಾಡುವುದರಿಂದ ಅರಣ್ಯ ಪದವೀಧರರು ಈಗಾಗಲೇ ಬೇಸರದಲ್ಲಿದ್ದಾರೆ. ಡಿಆರ್‌ಎಫ್‌ಒ ಹುದ್ದೆಗಳಿಗೆ ಹಾಲಿ ಇರುವ ನೇರ ನೇಮಕಾತಿ ರದ್ದುಗೊಳಿಸಿದರೆ ಅನ್ಯಾಯವಾಗುತ್ತದೆ ಎಂದರು.

ರಾಜ್ಯದ ಉತ್ತರ ಕನ್ನಡದ ಶಿರಸಿ, ಕೊಡಗಿನ ಪೊನ್ನಂಪೇಟೆ ಮತ್ತು ಶಿವಮೊಗ್ಗದ ಇರುವಕ್ಕಿಯಲ್ಲಿ ಅರಣ್ಯ ಪದವಿ ಕಾಲೇಜುಗಳಿವೆ. ವರ್ಷಕ್ಕೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರಣ್ಯ ಪದವಿ ಪಡೆಯುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X