ಉತ್ತರ ಕನ್ನಡ | ಜಲಾಶಯಗಳಿಂದ ನೀರು ಬಿಡುಗಡೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಂದ ಸೂಚನೆ

Date:

Advertisements

ಉತ್ತರ ಕನ್ನಡ ಜಿಲ್ಲೆಯು ಆ.20 ವರೆಗೆ ರೆಡ್ ಅಲರ್ಟ್ ಇದೆ. ಪ್ರಸ್ತುತ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮಳೆ ಕಡಿಮೆಯಾಗುವ ಸಾಧ್ಯತೆಯಿದ್ದು, ಘಟ್ಟದ ಮೇಲೆ ಇರುವ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜಲಾಶಯಗಳ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗುತ್ತಿದೆ. ಜಲಾಶಯಗಳಿಂದ ನೀರು ಹೊರಬಿಟ್ಟಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ಜಿಲ್ಲಾಡಳಿದಿಂದ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಹೇಳಿದರು.

ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟವು 1816 ಅಡಿಗಳಾಗಿದ್ದು, ಈಗಾಗಲೇ ಈ ಮಟ್ಟವನ್ನು ತಲುಪಿರುವುದರಿಂದ ಮಂಗಳವಾರ ಬೆಳಗ್ಗೆ 10 ಗಂಟೆಗೆ 15000 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಬಿಡಲಾಗಿದೆ. ಈ ಜಲಾಶಯದಿಂದ 50000 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಟ್ಟರೇ ನಮ್ಮ ಜಿಲ್ಲೆಯ 160 ಕುಟುಂಬಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. ಪ್ರಸ್ತುತ ಹೊರಬಿಟ್ಟಿರುವ ನೀರಿನಿಂದ ಯಾವುದೇ ತೊಂದರೆಯಾಗುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರರು, ಗ್ರಾಮ ಪಂಚಾಯತಿ, ಪೊಲೀಸ್ ಒಳಗೊಂಡ ತಂಡವು, 37 ಪರುಷ, 48 ಮಹಿಳೆ 16 ಮಕ್ಕಳು ಸೇರಿದಂತೆ 101 ಸಾರ್ವಜನಿಕರನ್ನು ಸಮೀಪದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದರು.

ಗೇರುಸೊಪ್ಪ ಜಲಾಶಯದಿಂದ 1 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ನೀರನ್ನು ಬಿಟ್ಟರೇ ಜಿಲ್ಲೆಯ 18 ಗ್ರಾಮ ಪಂಚಾಯಿತಿಗೆ ಹಾನಿಯಾಗುವ ಸಾಧ್ಯತೆಯಿದೆ. ಆದರೆ ಈ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ತುಂಬಾ ಕಡಿಮೆ ಇದೆ. ಜಲಾಶಯದಿಂದ ನೀರನ್ನು ಬಿಟ್ಟರೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುತ್ತಾರೆ, ಸದ್ರಿ ಜಲಾಶಯದ ನೀರು ಇಲ್ಲಿಗೆ ತಲುಪಲು 3 ರಿಂದ 4 ಗಂಟೆಗಳ ಕಾಲಾವಕಾಶ ಬೇಕಿದ್ದು, ಸಾಕಷ್ಟು ಸಮಯವಿರುದರಿಂದ ಜಿಲ್ಲಾಡಳಿದಿಂದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಲಾಗುವುದು ಎಂದರು.

Advertisements

ಇದನ್ನು ಓದಿದ್ದೀರಾ? ಶಿರಸಿ | ನಿಲೇಕಣಿ ಮೀನು ಮಾರುಕಟ್ಟೆ ಬಾಡಿಗೆ ಬಾಕಿ: ಪಾವತಿಸದಿದ್ದರೆ ಬೀಗ‌ ಜಡಿಯುವ ಎಚ್ಚರಿಕೆ ನೀಡಿದ ನಗರಸಭೆ

ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿರುವುದರಿಂದ ಕದ್ರಾ ಜಲಾಶಯದ ನೀರಿನ ಮಟ್ಟವು 30.8 ಕ್ಕೆ ಏರಿದೆ. ಇಲ್ಲಿ ಪ್ರತಿ ನಿತ್ಯ ವಿದ್ಯುತ್ ಉತ್ಪಾದನೆಗೆ 20 ಕ್ಯೂಸೆಕ್ ಸಾವಿರ ನೀರನ್ನು ಹೊರಬಿಡಲಾಗುತ್ತಿದ್ದು, ಮಂಗಳವಾರ ಹೆಚ್ಚುವರಿಯಾಗಿ 30 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ. ಅಲ್ಲಿನ ಸಾರ್ವಜನಿಕರಿಗೆ ಈಗಾಗಲೇ ಸ್ಥಳಾಂತರಗೊಳ್ಳಲು ಸೂಚನೆ ನೀಡಲಾಗಿದೆ. ಒಟ್ಟು 50 ಸಾವಿರ ಕ್ಯೂಸೆಕ್ ವರೆಗೂ ನೀರು ಬಿಟ್ಟರೇ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಇದಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಟ್ಟರೆ ಇದಕ್ಕೆ ಮುನ್ನೆಚ್ಚರಿಕೆಯಾಗಿ ಕಾಳಜಿ ಕೇಂದ್ರಗಳನ್ನು ಸನ್ನದ್ಧವಾಗಿ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X