ಕೋಮು ದ್ವೇಷ ಪ್ರಕರಣ: ವಿಕ್ರಮ್ ಹೆಗಡೆ ವಿರುದ್ಧ ವಿಚಾರಣೆ ಹಿಂಪಡೆಯಲು ಮುಂದಾಗಿದೆಯೇ ಸರ್ಕಾರ?

Date:

ಪ್ರಚೋದನಾಕಾರಿ ತಪ್ಪು ಸಂದೇಶಗಳನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯದ ಕುರಿತು ದ್ವೇ‍ಷ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದುತ್ವ ಕೋಮುವಾದಿ, ಪೋಸ್ಟ್‌ ಕಾರ್ಡ್‌ ಸಂಪಾದಕ ಮಹೇಶ್ ಹೆಗಡೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ.

- Advertisement -

2017ರಲ್ಲಿ ಮಹೇಶ್ ಹೆಗಡೆ ಮತ್ತು ವಿವೇಕ ಶೆಟ್ಟಿ ಎಂಬಾತನ ವಿರುದ್ಧ ಕಾರವಾರದಲ್ಲಿ ಅಂದಿನ ತಹಶೀಲ್ದಾರ್ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ‘ಸಿ’ ರಿಪೋರ್ಟ್‌ ಸಲ್ಲಿಸಿದ್ದಾರೆ. ನ್ಯಾಯಾಲಯವು ವರದಿಯನ್ನು ಒಪ್ಪಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಿ ರಿಪೋರ್ಟ್‌ ಆಧರಿಸಿ ಪ್ರಕರಣವನ್ನು ವಿಚಾರಣೆಯಿಂದ ಹಿಂಪಡೆದುಕೊಳ್ಳಲು ಯಾವುದೇ ಅಭ್ಯಂತರವಿಲ್ಲ ಎಂದು ಕಾರವಾರ ಪೊಲೀಸ್ ಇನ್ಸ್‌ಪೆಕ್ಟರ್‌ ಅಕ್ಟೋಬರ್ 1 ರಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

“ಪ್ರಕರಣ ಕುರಿತು ನಡೆಸಿದ ತನಿಖೆಯಿಂದ ಆರೋಪಿತರು ಪತ್ತೆಯಾಗದ ಕಾರಣ ಸದರಿ ಪ್ರಕರಣವನ್ನು ತುರ್ತು ನಾಪತ್ತೆ ಎಂದು ಪರಿಗಣಿಸಿ ಸಿಜೆಎಂ ನ್ಯಾಯಾಲಯಕ್ಕೆ 2021ರ ಏಪ್ರಿಲ್‌ 8ರಂದು ‘ಸಿ’ ಅಂತಿಮ ವರದಿಯನ್ನು ಸಲ್ಲಿಸಲಾಗಿತ್ತು. ವರದಿಯನ್ನು 2021ರ ಅಕ್ಟೋಬರ್‌ 29ರಂದು ನ್ಯಾಯಾಲಯವು ಅಂಗೀಕರಿಸಿದೆ. ಆದ್ದರಿಂದ  ಪ್ರಕರಣವನ್ನು ಅಭಿಯೋಜನೆಯಿಂದ ಹಿಂಪಡೆದುಕೊಳ್ಳಲು ಯಾವುದೇ ಅಭ್ಯಂತರ ಇರುವುದಿಲ್ಲ” ಎಂದು ಪೊಲೀಸ್‌ ಇನ್ಸ್‌ಪೆಕ್ಟರ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣವನ್ನು ಹಿಂಪಡೆಯುವ ಸಂಬಂಧ ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರ ಆದೇಶಕ್ಕೆ ಕಡತವನ್ನು ಮಂಡಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣವೇನು?

ಹೊನ್ನಾವರದ ಪರೇಶ್‌ ಮೇಸ್ತಾ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಉಂಟು ಮಾಡುವಂತಹ, ಪ್ರಚೋದನಾಕಾರಿ ಸಂದೇಶಗಳನ್ನು ರವಾನಿಸಿ ಸಾರ್ವಜನಿಕ ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‌ ಕಾರ್ಡ್‌ ವೆಬ್‌ಸೈಟ್‌ನಲ್ಲಿ ಸಂದೇಶಗಳನ್ನು ಬಿತ್ತರಿಸಲಾಗಿತ್ತು. ಆ ಸಂದೇಶಗಳು ಎರಡು ಕೋಮಿನ ನಡುವೆ ದ್ವೇಷದ ಭಾವನೆ ಬೆಳೆಯಲು ಕಾರಣವಾಗಿದ್ದವು. ಹೀಗಾಗಿ, ಪೋಸ್ಟ್‌ ಕಾರ್ಡ್‌ ನ್ಯೂಸ್‌ ಜಾಲತಾಣದ ಮುಖ್ಯಸ್ಥ ವಿವೇಕ ಶೆಟ್ಟಿ ಮತ್ತು ಮಹೇಶ ಹೆಗಡೆ ವಿರುದ್ಧ ಕಾರವಾರ ತಹಶೀಲ್ದಾರ್ ಗೋವಿಂದ ನಾಯ್ಕ ದೂರು ದಾಖಲಿಸಿದ್ದರು.

ಅವರ ದೂರನ್ನಾಧರಿಸಿ ಇಬ್ಬರೂ ಆರೋಪಿಗಳ ವಿರುದ್ಧ ಐಪಿಸಿ 183, ಕಲಂ 153, 153 (ಎ) 505 (2) ಅಡಿಯಲ್ಲಿ 2017ರ ಡಿಸೆಂಬರ್‌ 14ರಂದು ಎಫ್‌ಐಆರ್‌ ಕೂಡ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು 2021ರ ಏಪ್ರಿಲ್‌ 8ರಂದು ನ್ಯಾಯಾಲಯಕ್ಕೆ ‘ಸಿ’ ಅಂತಿಮ ವರದಿಯನ್ನು ಸಲ್ಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...