ಉತ್ತರ ಕನ್ನಡ | ಟಿಪ್ಪರ್‌ ಹರಿಸಿ ಸ್ನೇಹಿತನ ಕೊಲೆ ಯತ್ನ; ಆಟೋ ಚಾಲಕ ಸಾವು

Date:

ಇಬ್ಬರು ಯುವಕರ ನಡುವಿನ ಜಗಳದ ದ್ವೇಷಕ್ಕೆ ತಿರುಗಿ ಕೊಲೆ ಮಾಡುವ ಹಂತವನ್ನು ತಲುಪಿದ್ದು, ಇದರಲ್ಲಿ ಅಮಾಯಕ ಆಟೋ ಚಾಲಕ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರೆಯಂಗಡಿ ಬಳಿ ನಡೆದಿದೆ.

ಯುವಕನೊಬ್ಬ ತನ್ನ ಸ್ನೇಹಿತನನ್ನು ಕೊಲ್ಲಲೆಂದು ಆತ ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಟಿಪ್ಪರ್‌ ಹರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸ್ನೇಹಿತನ ಬದಲಾಗಿ ಆಟೋ ಚಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ವಿನಾಯಕ ಭಟ್‌ ಎಂಬಾತನಿಗೂ ಕೇಶವ ನಾಯ್ಕ ಮತ್ತು ವಸಂತ ನಾಯ್ಕ ಎಂಬವರಿಗೂ ಹಣಕಾಸಿನ ವಿಚಾರಕ್ಕೆ ಜಗಳ ಉಂಟಾಗಿತ್ತು. ಹೀಗಾಗಿ ಇಬ್ಬರ ಮಧ್ಯೆ ದ್ವೇಷ ಬೆಳೆದಿತ್ತು. ಮಂಗಳವಾರ ರಾತ್ರಿ ಕೇಶವ ಮತ್ತು ವಸಂತ ಅವರು ಆಟೋ ಒಂದರ ಬಳಿ ನಿಂತಿದ್ದರು. ಆಗ ಅವರನ್ನು ಕಂಡವನೇ ವಿನಾಯಕ ತಾನು ಚಲಾಯಿಸುತ್ತಿದ್ದ ಟಿಪ್ಪರನ್ನು ಅವರ ಮೇಲೆ ಹಾಯಿಸಿದ್ದ. ಆದರೆ, ಅಲ್ಲಿ ಕೇಶವ ಮತ್ತು ವಸಂತನ ಜತೆಗೆ ಆಟೋ ಚಾಲಕ ಓಲ್ವಿನ್‌ ಕೂಡಾ ನಿಂತಿದ್ದರು. ವಿನಾಯಕ ಭಟ್‌ ಹಾಯಿಸಿದ ಟಿಪ್ಪರ್‌ ಆಲ್ವಿನ್‌, ಕೇಶವ ನಾಯ್ಕ್‌ ಮತ್ತು ವಸಂತ ನಾಯ್ಕ್‌ಗೆ ಅಪ್ಪಳಿಸಿದೆ. ಈ ವೇಳೆ ಓಲ್ವಿನ್‌ ಅವರಿಗೆ ಅದು ಸರಿಯಾಗಿ ಗುದ್ದಿದ್ದು, ತಲೆಗೆ ಗಂಭೀರವಾಗಿ ಗಾಯವಾಗಿದೆ. ಮೂವರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರಲ್ಲಿ ಓಲ್ವಿನ್‌ ಮೃತಪಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಸಿಟ್ಟಿನ ಭರದಲ್ಲಿ ಅಮಾಯಕನನ್ನು ಬಲಿ ಪಡೆದ ಆರೋಪಿ ವಿನಾಯಕ ಭಟ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...