ಉತ್ತರ ಕನ್ನಡ | ಏಕಕಾಲಕ್ಕೆ ಹೊನ್ನಾವರ-ಅಂಕೋಲಾ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

Advertisements

ಹೊನ್ನಾವರ ಮತ್ತು ಅಂಕೋಲಾ ಉಪನೊಂದಾಣಿಧಿಕಾರಿಗಳ ಕಚೇರಿಯಲ್ಲಿ ಸ್ವತ್ತು ನೋಂದಣಿ, ಋಣಭಾರ ಪತ್ರ ಖರೀದಿ, ದಸ್ತಾವೇಜುಗಳ ದೃಢೀಕರಣ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರ ಹತ್ತಿರ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಹಾಗೂ ಖಾಸಗಿ ಮಧ್ಯವರ್ತಿಗಳ ಸಹಾಯದಿಂದ ಅಕ್ರಮವಾಗಿ ಹಣ ಸ್ವೀಕರಿಸುತ್ತಿರುವುದಾಗಿ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕಡತ ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಂದ ಬಂದಿರುವ ಈ ದೂರುಗಳಿಗೆ ಸಂಬಂಧಿಸಿದಂತೆ, ಯಾವುದೇ ಕ್ರಮವನ್ನು ಇಲಾಖೆಯ ಮೇಲ್ದರ್ಜೆಯ ಅಧಿಕಾರಿಗಳು ಕೈಗೊಂಡಿರದ ಕಾರಣ, ಕಾರವಾರ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ಕುಮಾರಚಂದ್ರರ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ ಧನ್ಯಾ ಎನ್. ನಾಯಕ, ಪೊಲೀಸ್ ಇನ್ಸ್ಪೆಕ್ಟರ್ ರವಿ ಎನ್.ಎನ್, ವಿನಾಯಕ ಬಿಲ್ಲವ, ವಿಜಯ ಸದಾಶಿವ ಕಾಂಬ್ಳೆ ಹಾಗೂ ಸಿಬ್ಬಂದಿಗಳಿಂದಾದ ಎರಡು ತಂಡಗಳು ಸೆಪ್ಟೆಂಬರ್ 25 ರಂದು ಸಂಜೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಏಕಕಾಲದಲ್ಲಿ ಹೊನ್ನಾವರ ಮತ್ತು ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆಸಿದರು

ಈ ಸುದ್ದಿ ಓದಿದ್ದೀರಾ? ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಶೋಧನೆಯ ವೇಳೆ ಎರಡೂ ಕಚೇರಿಗಳ ಕರ್ತವ್ಯದಲ್ಲಿ ತೀವ್ರ ಅವ್ಯವಸ್ಥೆ, ನ್ಯೂನ್ಯತೆ ಹಾಗೂ ಕರ್ತವ್ಯಲೋಪ ಪತ್ತೆಯಾದ ಹಿನ್ನೆಲೆಯಲ್ಲಿ, ಈ ಕುರಿತು ಸಮಗ್ರ ವರದಿಯನ್ನು ತಯಾರಿಸಿ ಮುಂದಿನ ಕ್ರಮಕ್ಕಾಗಿ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತರಿಗೆ ಸಲ್ಲಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡಿದ್ದ ಹೈದರಾಬಾದ್ ಪ್ರವಾಸಿಗರಿಗೆ...

ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ – ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚನೆ.

ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು...

ಉತ್ತರ ಕನ್ನಡ | ಕುಂಟುತ್ತಾ ಸಾಗುತ್ತಿರುವ ಸಮೀಕ್ಷೆ; ಅರ್ಧದಷ್ಟು ಸಮೀಕ್ಷೆದಾರರು ಕೆಲಸಕ್ಕೆ ಗೈರು

ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೂರನೇ ದಿನವೂ...

ಉತ್ತರ ಕನ್ನಡ | ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರ ಹೊಸ ಕ್ರಮ; ಕ್ಯೂಆರ್ ಕೋಡ್ ಮೂಲಕ ಸುಲಭ ದೂರು ವ್ಯವಸ್ಥೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ತೀವ್ರವಾಗುತ್ತಿರುವ ಮಾದಕ ವಸ್ತು ಬಳಕೆ...

Download Eedina App Android / iOS

X