ಅಂಕೋಲಾ ದುರಂತ | ಕಾರ್ಯಾಚರಣೆಗಾಗಿ ಶಿರೂರು ತಲುಪಿದ ಬೂಮ್ ಪೊಕ್ಲೇನ್ ಯಂತ್ರ

Date:

Advertisements

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು 9ನೇ ದಿನವೂ ಮುಂದುವರಿಸಲಾಗಿದೆ.

ಶಿರೂರು ಭೂಕುಸಿತದಲ್ಲಿ ಸಿಲುಕಿರುವವರ ಹುಡುಕಾಟಕ್ಕೆ ಬೂಮ್ ಎಕ್ಸ್‌ಕಾವೇಟರ್ ಅಥವಾ ಬೂಮ್ ಪೊಕ್ಲೇನ್ ಯಂತ್ರವನ್ನು ಬೆಳಗಾವಿಯಿಂದ ತರಿಸಲಾಗಿದ್ದು, ಜುಲೈ 24ರ ಮಧ್ಯಾಹ್ನ 12ರ ಹೊತ್ತಿಗೆ ಶಿರೂರಿಗೆ ತಲುಪಿದೆ. ಇದಕ್ಕೂ ಮೊದಲು ಬೂಮ್ ಅಗೆಯುವ ಯಂತ್ರವನ್ನು ಸಾಗಿಸುತ್ತಿದ್ದ ವಾಹನವು ಯಾಂತ್ರಿಕ ದೋಷದಿಂದ ಅಂಕೋಲಾದಲ್ಲಿ ಸ್ಥಗಿತಗೊಂಡಿತ್ತು.

ಈಗ ಶಿರೂರಿಗೆ ತಲುಪಿರುವ ಈ ಬೂಮ್ ಪೊಕ್ಲೇನ್ ಯಂತ್ರವು, ಸುಮಾರು 60 ಅಡಿ ಆಳದವರೆಗಿನ ಮಣ್ಣು ಎತ್ತಲು ನೆರವಾಗಲಿದೆ. ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರ ನೆರವಿನಿಂದ ಈ ಯಂತ್ರವನ್ನು ಶಿರೂರಿಗೆ ತರಲಾಗಿದೆ.

Advertisements

mla sathish sail

ಈ ಬಗ್ಗೆ ಘಟನಾ ಸ್ಥಳದಲ್ಲಿ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಶಾಸಕ ಸತೀಶ್ ಸೈಲ್, “ಈ ಯಂತ್ರವು ಸುಮಾರು 60 ಅಡಿ ಆಳದವರೆಗೆ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ. ನಿರಂತರ ಮಳೆ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮ ಡ್ರಿಜ್ಜಿಂಗ್ ಯಂತ್ರವನ್ನು ತರಿಸಲಾಗುತ್ತಿಲ್ಲ. ಆದ್ದರಿಂದ ಈ ಯಂತ್ರವನ್ನು ತರಿಸಿದ್ದೇವೆ. ನೆಲದ ಮೇಲೆ ಇಟ್ಟುಕೊಂಡು ಇದು ಕಾರ್ಯಾಚರಿಸಲಿದೆ” ಎಂದು ತಿಳಿಸಿದರು.

“ಇದು 60 ಅಡಿ ಆಳದವರೆಗೆ ಕೆಲಸ ಮಾಡುವುದರಿಂದ ಮೃತದೇಹ ಸಿಕ್ಕರೂ ಸಿಗಬಹುದು. ಒಂದು ವೇಳೆ ಸಿಕ್ಕರೆ ನಮ್ಮ ಕಾರ್ಯಾಚರಣೆ ಇಂದಿಗೆ ಮುಗಿಯಲಿದೆ. ನನ್ನ ಪ್ರಕಾರ ಪೂರ್ವ ಈಶಾನ್ಯ ಹಾಗೂ ಪೂರ್ವ ಆಗ್ನೇಯದಲ್ಲಿ ಸಿಗುವ ವಿಶ್ವಾಸ ಇದೆ. ಆಗುತ್ತದೆಂಬ ನಿರೀಕ್ಷೆ. ಈ ಕಾರ್ಯಾಚರಣೆ ಆದಷ್ಟು ಶೀಘ್ರವಾಗಿ ಮುಗಿಯಬೇಕೆಂಬುದು ನಮ್ಮ ಬಯಕೆ. ಎಲ್ಲರ ಪ್ರಾರ್ಥನೆ ಇರಲಿ” ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು.

ವರದಿ: ಜಿ ಎಂ ಪವಿತ್ರಾ, ಮುಸ್ತಫಾ ಕೊಪ್ಪಳ

ಶಿರೂರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X