ಚಿಕ್ಕಬಳ್ಳಾಪುರ | ಮೂರನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

Date:

Advertisements

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಹಾಗೂ ಸೇವಾ ಸೌಲಭ್ಯ ಒದಗಿಸುವುದು ಸೇರಿದಂತೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಕಚೇರಿ ಎದುರು ಸೋಮವಾರದಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಸಂಘದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸೆಪ್ಟೆಂಬರ್‌ನಲ್ಲಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸರ್ಕಾರ ಭರವಸೆಯಂತೆ ಕೈಬಿಡಲಾಗಿತ್ತು. ಆದರೆ ಬೇಡಿಕೆ ಈಡೇರಿಸಲು ರಚಿಸಿರುವ ಸಮಿತಿಯು ನಿಷ್ಕ್ರಿಯೆಗೊಂಡಿರುವುದರಿಂದ ಸಮಸ್ಯೆಗಳು ಇದುವರೆಗೂ ಬಗೆಹರಿದಿಲ್ಲ ಎಂದು ಗ್ರಾಮ ಆಡಳಿತಾಧಿಕಾರಿಗಳು ಆರೋಪಿಸಿದ್ದಾರೆ.

ನಮ್ಮ ಸಮಸ್ಯೆಗಳ ಕುರಿತು ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ರಾಜ್ಯ ಸಂಘದ ನಿರ್ದೇಶನದಂತೆ ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದು, ಕರ್ತವ್ಯದ ಸಮಯದಲ್ಲಿ ಸಮರ್ಪಕವಾಗಿ ಸೇವೆಗೆ ಅಗತ್ಯವಾಗಿರುವ ಸುಸಜ್ಜಿತ ಕಚೇರಿ, ಕುರ್ಚಿ, ಟೇಬಲ್, ಲ್ಯಾಪ್‌ಟಾಪ್, ಮೊಬೈಲ್, ಸಿಮ್, ಸ್ಕಾನರ್ ಸೌಲಭ್ಯ ಒದಗಿಸಬೇಕು. ಅಂತರ ಜಿಲ್ಲಾ ವರ್ಗಾವಣೆ ಕಲ್ಪಿಸಬೇಕೆಂಬ ಬೇಡಿಕೆ ಈಡೇರಿಸಬೇಕೆಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Advertisements

ಇದನ್ನೂ ಓದಿ : ಅಧ್ವಾನದ ಆಗರ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆ

ಧರಣಿ ವೇಳೆ ಕಂದಾಯ ಇಲಾಖೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ಸಂಘದ ತಾಲೂಕು ಅಧ್ಯಕ್ಷ ಪರಶುರಾಮ್, ಗೌರವಾಧ್ಯಕ್ಷ ಶಂಕರರೆಡ್ಡಿ, ಖಜಾಂಚಿ ಮಂಜುನಾಥ್, ಕಾರ್ಯದರ್ಶಿ ಪುನೀತ್, ದೀಪ, ವಿದ್ಯಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X