ಬೀದರ್‌ | ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರ : ಸಂಜೀವಕುಮಾರ ಅತಿವಾಳೆ

Date:

12ನೇ ಶತಮಾನದಲ್ಲಿ ಮೌಢ್ಯತೆಯ ವಿರುದ್ಧ ಕ್ರಾಂತಿಗೈದ ಬಸವಣ್ಣನವರು ಜಗತ್ತಿನ ಸರ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿ, ಸಾಮಾಜಿಕ ಸುಧಾರಕರಾಗಿ ಲೋಕಕ್ಕೆ ಬೆಳಕಾಗಿದ್ದಾರೆ, ಅವರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದಾಗ ಮಾತ್ರ ಅವರ ಜಯಂತಿ ಉತ್ಸವ ಆಚರಿಸಿದಕ್ಕೂ ಸಾರ್ಥಕವಾಗುತ್ತದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ
ಸದಸ್ಯ ಡಾ. ಸಂಜೀವಕುಮಾರ ಅತಿವಾಳೆ ನುಡಿದರು.

- Advertisement -

ಬೀದರ್ ನಗರದ ಸ್ಪರ್ಧಾ ಸಂಕಲ್ಪ ಅಕಾಡೆಮಿಯಲ್ಲಿ ಆಯೊಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನೆ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಶ್ರೇಷ್ಠವಾದದ್ದು, ಅಂತಹ ಸಾಹಿತ್ಯ ಭಾಷೆ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಶತಮಾನೋತ್ಸವ ಸಂಭ್ರಮದ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಗಣನೀಯವಾದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಸಂಸ್ಥೆ ಸಾಹಿತ್ಯ ಪರಿಷತ್ತಾಗಿದೆ. ಗಡಿ ಭಾಗದಲ್ಲಿ ಕನ್ನಡದ ಬೆಳವಣಿಗೆಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೂಡ ಕನ್ನಡ ಅಭಿವೃದ್ಧಿಗಾಗಿ ಪರಿಷತ್ತಿನೊಂದಿಗೆ ಕೆಲಸ ಮಾಡಲು ಇಚ್ಛಿಸುತ್ತದೆ” ಎಂದರು.

ಸ್ಪರ್ಧಾ ಸಂಕಲ್ಪ ಅಕಾಡೆಮಿ ಅಧ್ಯಕ್ಷ ನಾಗೇಶ ಸ್ವಾಮಿ ಮಾತನಾಡಿ, “ಕನ್ನಡ ನಾಡು-ನುಡಿಗಾಗಿ ಅನೇಕ ಸಾಹಿತಿಗಳು ಕಲಾವಿದರು, ಹೋರಾಟಗಾರರ ಶ್ರಮದ ಫಲವಾಗಿ ಇಂದು ಗಡಿ ಭಾಗದಲ್ಲಿ ಕನ್ನಡ ಉಳಿದುಕೊಂಡಿದೆ” ಎಂದರು.

ಮಹಿಳಾ ಘಟಕದ ತಾಲೂಕು ಕಸಾಪ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, “ಚಿಕ್ಕಂದಿನಿಂದಲೆ ಬಸವಣ್ಣನವರ ವಚನಗಳು ನಮ್ಮ ಹಿರಿಯರು ತಿಳಿಸಿಕೊಡುತಿದ್ದರು. ನೂರಕ್ಕೂ ಹೆಚ್ಚು
ವಚನಗಳು ನಮ್ಮ ಅಜ್ಜಿ ಬಾಯಿಪಾಠವಾಗಿ ಹೇಳುತ್ತಾರೆ. ವಚನ ಸಾಹಿತ್ಯ ಜನರ ಬದುಕಿಗೆ ಮಾರ್ಗದಶಿಯಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಟಿ.ಎಂ.ಮಚ್ಚೆ, ತಾಲೂಕು ಕಸಾಪ ಅಧ್ಯಕ್ಷ ಎಂ.ಎಸ್.ಮನೋಹರ, ಗೌರವ ಕಾರ್ಯದರ್ಶಿ ಪ್ರೊ.ಜಗನ್ನಾಥ ಕಮಲಾಪೂರೆ ಇದ್ದರು. ಸಿದ್ಧಾರೂಢ ಭಾಲ್ಕೆ ಸ್ವಾಗತಿಸಿದರು. ಅಶೋಕ ದಿಡಗೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...