ನೂತನ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ತುಮಕೂರು ಜಿಲ್ಲಾ ವಾಲ್ಮೀಕಿ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಸಮಾರಂಭದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು, “ತುಮಕೂರಿನ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಜೂನ್ 25ರ ಭಾನುವಾರ ಬೃಹತ್ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಪ್ರಸನ್ನಾಂದ ಪುರಿ ಸ್ವಾಮೀಜಿ, ಶಿಡ್ಲೇಕೋಣದ ಶ್ರೀ ಸಂಜಯ್ ಕುಮಾರ ಸ್ವಾಮೀಜಿ ಅವರು ಸಮಾರಂಭದ ಸಾನಿಧ್ಯವಹಿಸಲಿದ್ದಾರೆ” ಎಂದು ಅವರು ಹೇಳಿದರು.
“ಕಾರ್ಯಕ್ರಮದಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ನೂತನ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನು ಅಭಿನಂದಿಸಲಾಗುವುದು. ಜಿಲ್ಲೆಯ ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲಿರುವ ಮುಖಂಡರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ” ಎಂದು ಹೇಳಿದರು.
ಈ ವೇಳೆ ತಾಲೂಕು ಅಧ್ಯಕ್ಷ ರಂಗಶ್ಯಾಮಣ್ಣ, ಮುಖಂಡರಾದ ಗುಬ್ಬಿ ನಾಗರಾಜು, ಆಂಜನೇಯಲು, ಹನುಮಂತರಾಯಪ್ಪ, ಜಿ.ಎಸ್ ಜಗದೀಶ್ ಕುಮಾರ್, ಶಂಕರನಾರಾಯಣಬಾಬು, ಬೆಸ್ಕಾಂ ನಿವೃತ್ತ ಅಧಿಕಾರಿ ಮುದ್ದುಕೃಷ್ಣ, ದೊಡ್ಡೇರಿ ಶಿವಣ್ಣ, ರಂಜಿತ್, ನಾರಾಯಣಪ್ಪ, ಚಂದ್ರಮ್ಮ ಹಾಗೂ ಮತ್ತಿತರರು ಇದ್ದರು.