ಸಂವಿಧಾನದಲ್ಲಿನ ಮೌಲ್ಯಗಳು ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಭಿಪ್ರಾಯಪಟ್ಟರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ 74ನೇ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಸಲ್ಲಿಸಿ ಭಾರತದ ಸಂವಿಧಾನ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
“ಸಂವಿಧಾನ ಓದುವುದರ ಜೊತೆಗೆ ಅದರಲ್ಲಿನ ಕರ್ತವ್ಯ, ಹಕ್ಕು ಹಾಗೂ ಮೌಲ್ಯಗಳನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರರು ಕೊಟ್ಟ ಸಂವಿಧಾನವು ಅತ್ಯಂತ ಶ್ರೇಷ್ಠ ಸಂವಿಧಾನವಾಗಿದ್ದು, ನಮ್ಮೆಲ್ಲರಿಗೂ ದಾರಿ ದೀಪವಾಗಿದೆ. ಸರ್ವರೂ ಸಂವಿಧಾನದ ಹಾದಿಯಲ್ಲಿ ಸಾಗೋಣ” ಎಂದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬರ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘಟನೆಗಳು ಆಗ್ರಹ
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಡಿವೈಎಸ್ಪಿ ಬಸವೇಶ್ವರ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸರೋಜಾ ಹಾಗೂ ಸಮಾಜದ ಮುಖಂಡರಾದ ಮುಖಂಡರಾದ ಮರೆಪ್ಪ ಚಟ್ಟೇರಕರ್, ನಿಂಗಪ್ಪ ಕೊಲ್ಲೂರಕರ್, ನಗರ ಸಭೆ ಸದಸ್ಯೆ ಬಸಮ್ಮ ಮಹೇಶ್ ಕುರಕುಂಬಳ, ಮಂಜು ದಾಸನಕೇರಿ, ಸಾಮದೇವ ದಾಸನಕೇರಿ, ಹಣಮಂತ ಲಿಂಗೇರಿ, ಮಲ್ಲಣ್ಣ ದಾಸನಕೇರಿ, ಡಾ. ಭಗವಂತ ಅನ್ವಾರ್, ಮಲ್ಲಿಕಾರ್ಜುನ ಕುರಕುಂಬಳ, ಗೋಪಾಲ್ ತೆಳಗೇರಿ, ಶರಣು ನಾಟೇಕಾರ, ಭೀಮಶಪ್ಪ ಕಾಗಿ, ಮಲ್ಲಿಕಾರ್ಜುನ ಈಟೇ, ಸೈದಪ್ಪ ಸುಂಗಲಕರ್, ಪರಶುರಾಮ ಒಡೆಯರ್, ಮಲ್ಲಿನಾಥ ಸುಂಗಲಕರ್ ಸೇರಿದಂತೆ ಸಮಾಜದ ಹಲವಾರು ಮುಖಂಡರು ಉಪಸ್ಥಿತರಿದ್ದರು.