ದಾವಣಗೆರೆ | ಕೊಲೆ ಆರೋಪಿ, ನಟ ದರ್ಶನ್‌ಗೆ ಕಠಿಣ ಶಿಕ್ಷೆ ವಿಧಿಸಲು ವೀರಶೈವ ಸಮಾಜ ಆಗ್ರಹ

Date:

ರೇಣುಕಾ ಸ್ವಾಮಿ ಅವರ ಕೊಲೆ ಆರೋಪಿ ನಟ ದರ್ಶನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆತನನ್ನು ಚಿತ್ರರಂಗದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ವೀರಶೈವ ಸಮಾಜದ ಮುಖಂಡರು  ಪ್ರತಿಭಟನೆ ನಡೆಸಿದ್ದಾರೆ.

- Advertisement -

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅತ್ಯಂತ ಹೀನವಾಗಿ ಕೊಲೆಯಾದ ರೇಣುಕಾ ಸ್ವಾಮಿಯವರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಮೃಗದ ರೀತಿಯಲ್ಲಿ ಆತನ ಮೇಲೆ ಹಲ್ಲೆ ಮಾಡಿ, ಅತ್ಯಂತ ಹೀನ ರೀತಿಯಲ್ಲಿ ಕೊಲೆ ಮಾಡಿರುವ ದರ್ಶನ್ ಮತ್ತು ಅವನ ಗೆಳತಿ ಹಾಗೂ ಸಹಚರರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಪ್ರತಿಭಟನೆಯಲ್ಲಿ ಮಾತನಾಡಿದ ರವಿ ಬಲ್ಲೂರ್, “ವೀರಶೈವ ಸಮಾಜದ ರೇಣುಕಾ ಸ್ವಾಮಿ ಅತ್ಯಂತ ಮುಗ್ದ ವ್ಯಕ್ತಿಯಾಗಿದ್ದರು. ಆತ ತನ್ನ ಗೆಳತಿಗೆ ಕೆಟ್ಟ ಸಂದೇಶ ಕಳಿಸಿದ ಎನ್ನುವ ಕಾರಣಕ್ಕೆ ಆತನನ್ನು ಅಪಹರಿಸಿ ಗೋಡೌನ್‌ನಲ್ಲಿ ಕೊಡಿ ಹಾಕಿಕೊಂಡು ಹಲ್ಲೆ ಮಾಡಿದ್ದಾರೆ. ಆತನನ್ನು ಕೊಲೆಗೈದಿರುವ ದರ್ಶನ್ ಒಬ್ಬ ಕೊಲೆಗಡುಕ. ಇಂತಹವರಿಂದ ಸಮಾಜಕ್ಕೆ ಯಾವ ಸಂದೇಶ ನೀಡಲು ಸಾಧ್ಯವಿಲ್ಲ. ಆತನನ್ನು ಚಿತ್ರರಂಗ ಉಚ್ಛಾಟಿಸಬೇಕು. ಅವರ ಚಿತ್ರಗಳು ಯಾವ ಚಿತ್ರಮಂದಿರದಲ್ಲೂ ಬಿಡುಗಡೆಯಾಗಬಾರದು. ಚಿತ್ರಮಂದಿರಗಳಲ್ಲಿ ಆತನ ಸಿನಿಮಾ ಪ್ರದರ್ಶಿಸಿದರೆ ಸಮಾಜದಿಂದ ತಕ್ಕ ಶಾಸ್ತಿ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಪ್ರಕರಣದಲ್ಲಿ ಸರ್ಕಾರ ಮೌನವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಮೌನವಾಗಿದ್ದಾರೆ. ಪ್ರಕರಣದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಂಡು ಆರೋಪಿಗಳಿಗೆ ಶಿಕ್ಷೆ ನೀಡಬೇಕು. ಆರೋಪಿಗಳನ್ನು ಬಚಾವ್ ಮಾಡುವ ಮಾತುಗಳು ಕೇಳಿ ಬರುತ್ತಿವೆ. ಒಂದು ವೇಳೆ, ಆ ರೀತಿ ಅದಲ್ಲಿ ತೀವ್ರ ಹೋರಾಟ ರೂಪಿಸಲಾಗುತ್ತದೆ” ಎಂದರು.

“ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು. ಆತನ ಪತ್ನಿ ಗರ್ಭಿಣಿಯದ್ದು, ಮುಂದಿನ ಜೀವನಕ್ಕೆ ಅನುಕೂಲವಾಗುವಂತೆ ಸರ್ಕಾರ ಪರಿಹಾರ ನೀಡಬೇಕು. ಉದ್ಯೋಗಕ್ಕೆ ವ್ಯವಸ್ಥೆ ಮಾಡಿಕೊಡಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಿದ್ದಲಿಂಗಯ್ಯ, ವೀರಭದ್ರಯ್ಯ, ಮುಖಂಡರು ಹಾಗೂ ನೂರಾರು ಜನರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....