ಧರ್ಮಸ್ಥಳ ದೇವಸ್ಥಾನದ ಮಾಹಿತಿ ನೀಡಲು ವೀರೇಂದ್ರ ಹೆಗ್ಗಡೆ ನಿರಾಕರಣೆ

Date:

Advertisements

ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರರು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ತಿಳಿಸಿದ್ದಾರೆ. ಈ ವರದಿಯ ಪ್ರತಿಯನ್ನು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸೋಮನಾಥ ನಾಯಕ್‌ ಅವರಿಗೆ ಕಳಿಸಿದ್ದಾರೆ.

ಯಾವುದೇ ಮಾಹಿತಿಯನ್ನು ನೀಡಲು ನಿರಾಕರಿಸಿರುವ ಕಾರಣದಿಂದಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಮತ್ತು ನಿಯಮ 2002ರ ಸೆಕ್ಷನ್ 53ರಂತೆ ನೋಂದಣಿ ಮಾಡಲು ಪ್ರಸ್ಥಾವನೆ ಸಲ್ಲಿಸಲು ಅಸಾಧ್ಯವಾಗಿದೆ ಎಂದು ತಹಶೀಲ್ದಾರರು ಹೇಳಿದ್ದಾರೆ. ಇದಾದ ಬೆನ್ನಲ್ಲೇ ಮಾಹಿತಿ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿರುವ ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ, ನಾಗರಿಕ ಸೇವಾ ಟ್ರಸ್ಟ್‌ ಅನುಮಾನವನ್ನು ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? ಸೌಜನ್ಯ ಪ್ರಕರಣ: ಓದುಗರಿಗೆ ದ್ರೋಹ ಬಗೆದ ‘ಹೆಗ್ಗಡೆವಾಣಿ’ಗೆ ನಾಗರಿಕ ಸೇವಾ ಟ್ರಸ್ಟ್ ಪತ್ರ

Advertisements

ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ದೇವಸ್ಥಾನದ ಹೆಸರು & ವಿಳಾಸ, ದೇವಾಲಯದ ಮೂಲ ಮತ್ತು ಇತಿಹಾಸ, ದೇವಸ್ಥಾನದ ಭೂಮಿ, ಕಟ್ಟಡ, ಠೇವಣಿಗಳ ಮತ್ತು ಚಿನ್ನಾಭರಣಾದಿ ಸಕಲ ಚರ ಸೊತ್ತುಗಳ ವಿವರ, ವಾರ್ಷಿಕ ಆದಾಯ ಮತ್ತು ಖರ್ಚಿನ ವಿವರ ( ಆಡಿಟ್ ಆದ ಲೆಕ್ಕಪತ್ರದ ಪ್ರತಿಸಹಿತ) ನೀಡಬೇಕು. ಆದರೆ ಈ ಮಾಹಿತಿಯನ್ನು ನೀಡಲು ಧರ್ಮಾಧಿಕಾರಿಗಳು ನಿರಾಕರಿಸಿದ್ದಾರೆ.

ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ1

ಇದಾದ ಬೆನ್ನಲ್ಲೇ ಈ ಮಾಹಿತಿಗಳನ್ನು ಗುಟ್ಟಾಗಿಟ್ಟಿದ್ದಾರೆ ಎಂದರೆ ಸಂಶಯ ಬರುತ್ತಿದೆ ಎಂದು ನಾಗರಿಕ ಸೇವಾ ಟ್ರಸ್ಟ್‌ ಹೇಳಿದೆ. “ಪ್ರತಿವರ್ಷ ಲೆಕ್ಕಪತ್ರ ನೀಡಬೇಕು. ಸಾರ್ವಜನಿಕರಿಂದ ನಗದು ಕಾಣಿಕೆ & ದೇಣಿಗೆ, ವಸ್ತುರೂಪದ ದೇಣಿಗೆ ಪಡೆಯುವ ದೇವಾಲಯ ಅದರ ಲೆಕ್ಕಪತ್ರವನ್ನು ಸಾರ್ವಜನಿಕರ ಮುಂದೆ ಇಡಬೇಕು. ಆದರೆ ಮುಚ್ಚಿಡಲಾಗುತ್ತಿದೆ. ಈ ಮಾಹಿತಿಯನ್ನು ಗುಟ್ಟಾಗಿಟ್ಟಿದ್ದಾರೆ ಎಂದರೆ ಸಂಶಯ ಬರುವುದಿಲ್ಲವೇ” ಎಂದು ಪ್ರಶ್ನಿಸಿದೆ.

“ದೇವಳದ ಸಾವಿರಾರು ರೂಪಾಯಿ ಕೋಟಿ ಮೌಲ್ಯದ ಆಸ್ತಿ & ಹಣ ಏನಾಗಿದೆ ಮತ್ತು ಏನಾಗುತ್ತಿದೆ. 1050ಕ್ಕೂ ಅಧಿಕ ಎಕರೆ ದೇವಾಲಯದ ಭೂಮಿಯನ್ನು ಹೆಗ್ಗಡೆ ಕುಟುಂಬ ಕಬಳಿಸಿದ್ದಕ್ಕೆ ದಾಖಲೆ ಇದೆ. ದೇವಳದ ಆದಾಯ ಬಳಕೆ ಬಗ್ಗೆಯೂ ಮಾಹಿತಿ & ಸಾಕ್ಷಿಗಳಿವೆ” ಎಂದು ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ, ನಾಗರಿಕ ಸೇವಾ ಟ್ರಸ್ಟ್ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X