ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ : 16 ಮಂದಿ ವಿರುದ್ಧ ಎಫ್​ಐಆರ್; ತಡವಾಗಿ ಬೆಳಕಿಗೆ ಬಂದ ಘಟನೆ

Date:

  • ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಸಂಬಂಧಿಕರಿಂದಲೇ ಅತ್ಯಾಚಾರ : ದೂರು ದಾಖಲು
  • ಪ್ರಕರಣದ್ದೆಂದು ಹೇಳಲಾದ ಕೆಲವೊಂದು ವಿಡಿಯೋಗಳು ವೈರಲ್

ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆಯ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಘಟನೆಯ ಸಂಬಂಧ 16 ಮಂದಿಯ ವಿರುದ್ಧ ಎಫ್​ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಅಲ್ಲದೇ, ಈ ನಡುವೆ ಪ್ರಕರಣ ಸಂಬಂಧ ಇದೇ ಘಟನೆಯದ್ದೆಂದು ಹೇಳಲಾದ ಕೆಲವು ವಿಡಿಯೋಗಳು ಆಗಸ್ಟ್ 14ರಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಆದರೆ ವಿಡಿಯೋಗಳ ಬಗ್ಗೆ ಪೊಲೀಸರು ಇನ್ನಷ್ಟೇ ತನಿಖೆ ನಡೆಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪ್ರಕರಣದ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಶ್ರೀನಿವಾಸ್ ಸತ್ಯನಾರಾಯಣ್, ರಾಧಾ ಶ್ರೀನಿವಾಸ್, ಪ್ರದೀಪ್ ಶ್ರೀನಿವಾಸ್, ಸುದೀಪ್ ಶ್ರೀನಿವಾಸ್ ಹಾಗೂ ಗೋಪಾಲ್ ರಾವ್ ಪುಲ್ಲಯ್ಯ ಕೊಠಾರಿ, ರಾಮರಾವ್ ವೆಂಕಟ ನಾರಾಯಣ್ ಸೇರಿದಂತೆ 16 ಜನರ ವಿರುದ್ಧ ಎಫ್​​ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಜಮೀನು ವಿಚಾರವಾಗಿ ಕುಟುಂಬದ ಮಧ್ಯೆ ಏಳು ವರ್ಷಗಳಿಂದ ವಿವಾದವಿತ್ತು ಎನ್ನಲಾಗಿದ್ದು, ‘ಕಳೆದ ಜುಲೈ 27ರಂದು ಜಮೀನಿಗೆ ಹೋದಾಗ ತನ್ನನ್ನು ಅತ್ಯಾಚಾರ ಮಾಡಿದ್ದಾರೆಂದು’ ಆರೋಪಿಸಿ ಸಂತ್ರಸ್ತ ಮಹಿಳೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

‘ನಮ್ಮ ಪಾಲಿಗೆ ಬಂದಿದ್ದ ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಭಾವ ಹಾಗೂ ಸಂಬಂಧಿಕರೇ ಅತ್ಯಾಚಾರ ಮಾಡಿದ್ದು, ಪತಿಯ ಮೇಲೂ ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು, ಕಲಂ 143, 147, 376 (D), 148, 354, 504, 506 ಅಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ, ಪ್ರಕರಣದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ವಿಡಿಯೋ ಸತ್ಯಾಸತ್ಯತೆ ಪರಿಶೀಲನೆ : ಎಸ್‌ಪಿ ಯಶೋಧಾ ವಂಟಗೋಡಿ

ವೈರಲ್ ಆದ ವಿಡಿಯೋಗಳು ಹಳೆಯದ್ದು ಎಂಬ ಅನುಮಾನವಿದೆ. ಈ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದೇವೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹೇಳಿಕೆ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದೇವೆ. ವೈರಲಾಗುತ್ತಿರುವ ವಿಡಿಯೋ ಬಗ್ಗೆ ಕೂಡ ಸತ್ಯಾಸತ್ಯತೆ ಪರಿಶೀಲನೆ ನಡೆಸುತ್ತಿದ್ದೇವೆ. 15-20 ವರ್ಷಗಳಿಂದ ಮಧ್ಯೆ ಕೌಟುಂಬಿಕ ಕಲಹವಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ದೃಢಪಡುವವರೆಗೂ ಯಾರನ್ನೂ ಬಂಧಿಸುವುದಿಲ್ಲ ಎಂದು ಎಸ್‌ಪಿ ತಿಳಿಸಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...