ಆಪ್ತನ ಸಹೋದರ ನಿಧನ : ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ವಿಧಾನಸಭಾ ಸ್ಪೀಕರ್

Date:

ಮಂಗಳೂರು : ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಭಾನುವಾರ(ಜೂ.4) ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಚಾರ ತಿಳಿಯುತ್ತಿದ್ದಂತೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವನಿಗದಿ ಪಡಿಸಿದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಮರಣ ಹೊಂದಿದ ನಿವಾಸಕ್ಕೆ ದೌಡಾಯಿಸಿದ್ದರು. ಸಂಬಂಧಿಕರಲ್ಲಿ ಧೈರ್ಯ ತುಂಬಿದ ಅವರು ನಂತರ ನಡೆದ ಅಂತಿಮಯಾತ್ರೆಗೆ ಹೆಗಲಾದರು.

ಕಾಂಗ್ರೆಸ್ ನ ಹಿರಿಯ ಮುತ್ಸದ್ದಿ ಜನಾರ್ದನ ಪೂಜಾರಿಯವರು ಹಾಕಿಕೊಟ್ಟ ಸಂಪ್ರದಾಯವನ್ನು ಮುಂದುವರಿಸಿದ ಶಾಸಕರು ಎಂಬ ಕೀರ್ತಿಗೆ ಯು.ಟಿ ಖಾದರ್ ಭಾಜನರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಶರತ್ ಕಾಜವ

ನರಿಂಗಾನ ಕಂಬಳದ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸಹೋದರ, ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಶರತ್ ಕಾಜವ, ಮಿತ್ತಕೋಡಿ ಕಂಬಳದ ಯಶಸ್ಸಿಗಾಗಿ ಹಲವು ವಾರಗಳ ಕಾಲ ದುಡಿದಿದ್ದರು.

ತಾಯಿಯ ಅನಾರೋಗ್ಯವಿದ್ದಾಗಲೂ ಕಂಬಳದ ಕರೆಯಲ್ಲಿ ಆಗಬೇಕಾದ ವ್ಯವಸ್ಥೆ ಬಗ್ಗೆ ತುಂಬ ಕಾಳಜಿ ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪತ್ನಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...