ವಿಜಯನಗರ | ಮನರೇಗಾದಲ್ಲಿ ಅಕ್ರಮ‌ ಆರೋಪ; ನಿರ್ಲಕ್ಷ್ಯ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ನಿರ್ಲಕ್ಷ್ಯದಿಂದ ಕೆಲಸ ಮಾಡುತ್ತಿರುವ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮ ಪಂಚಾಯಿತಿ ಎಂದು ಪ್ರತಿಭಟನೆ ನಡೆಸಿ, ಪಿಡಿಒ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ಅಧಿಕಾರಿಗಳು ಕೂಲಿ ಕಾರ್ಮಿಕರಿಂದ ಒಂದು ವಾರ ಕೆಲಸ ಮಾಡಿಸಿದ್ದು, ಈಗ ಕೂಲಿ ಹಣವಿಲ್ಲವೆಂದು ಹೇಳುತ್ತಿದ್ದಾರೆ. ಶ್ರಮಪಟ್ಟು ದುಡಿದ ಕೆಲವು ಕಾರ್ಮಿಕರಿಗೆ ಉದ್ದೇಶ ಪೂರ್ವಕವಾಗಿ ಕಡಿಮೆ ಕೂಲಿ ನೀಡಿ ಕಾರ್ಮಿಕರಿಗೆ ಮರೆಮಾಚುತ್ತಿದ್ದಾರೆ” ಎಂದು ಆರೋಪಿಸಿದರು.

ತಾಲೂಕು ಗ್ರಾಕೂಸ ಕಾರ್ಯಕರ್ತೆ ಭಾಗ್ಯ ಈ ದಿನ.ಕಾಮ್ ಜೊತೆ ಮಾತನಾಡಿ, “ಮನರೇಗಾ ಸಮಸ್ಯೆ ಕೇಳಲು ಹೋದವರಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರುದ್ರಪ್ಪ ಹಾಗೂ ಕೆಲವು ಸದಸ್ಯರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ʼಹಣ ಎಲ್ಲಿಂದ ತರಬೇಕು ನೀವು ಕೇಳೋಕೆ ಯಾರು. ನೀವು ಕೇಳಿದ ಕೂಡಲೇ ನಿಮಗೆ ಕೂಲಿ ಕೊಡಬೇಕಾʼ ಎಂದು ಮಾತನಾಡಿದಾಗ ಕೂಲಿ ಕಾರ್ಮಿಕ ಹಾಗೂ ಅಧ್ಯಕ್ಷರ ಜೊತೆ ಮಾತಿನ ಚಕಮಕಿ ನಡೆಯಿತು” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕುಸುನೂರ ಗ್ರಾಮ ಪಂಚಾಯತಿ ಅವ್ಯವಸ್ಥೆ; ಕಾರ್ಮಿಕರಿಗೆ ದೊರೆಯದ ಜಾಬ್ ಕಾರ್ಡ್

ನಾವು ಗ್ರಾಮ ಪಂಚಾಯಿತಿ ಅಧಿಕಾರಿಗೆ ಮನವಿ ಸಲ್ಲಿಸಲು ಹೋದಾಗ ಇವರು ಮಧ್ಯೆ ಪ್ರವೇಶ ಮಾಡಿದ್ದಾರೆ. ಮನರೇಗಾ ಅನುದಾನ ದುರ್ಬಳಕೆಯಾಗುತ್ತಿದ್ದು, ಇದರಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಕೈವಾಡವಿದೆ” ಎಂದು ಆರೋಪಿಸಿದರು.

“ಪಂಚಾಯಿತಿ ಅಕ್ರಮಗಳನ್ನು ಕೇಳಲು ಹೋದವರಿಗೆ 20 ವರ್ಷಗಳಿಂದಲೂ ಇದೇ ಗತಿಯಾಗಿದೆ. ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಾರೆ” ಎಂದು ಆರೋಪಿಸಿದರು.ನಂತರ ಪಿಡಿಒ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಗ್ರಾಮೀಣ ಕೂಲಿ ಕಾರ್ಮಿಕರುಗಳಾದ ನೇತ್ರಾ, ವೀರಮ್ಮ, ಪುಟ್ಟಮ್ಮ, ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X