ವಿಜಯನಗರ | ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಅಂಬೇಡ್ಕರ್‌ ಜನ್ಮ ದಿನಾಚರಣೆ

Date:

ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ (ಗ್ರಾಕೂಸ) ನೇತೃತ್ವದಲ್ಲಿ ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವುದರ ಮೂಲಕ ವಿಭಿನ್ನವಾಗಿ ಡಾ. ಬಿ ಆರ್ ಅಂಬೇಡ್ಕರ್‌ ಜಯಂತಿ ಆಚರಿಸಿದ್ದಾರೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಅರಸನಾಳು, ಹಲವಾಗಲು, ಕುಂಚೂರು, ಬೆನ್ನಿಹಳ್ಳಿ, ಹಳ್ಳಿಕೆರೆ, ಗೌರಿಹಳ್ಳಿ, ಕಂಚಿಕೆರೆ, ಕುಣೆಮಾದಿಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಆಚರಿಸಲಾಗಿದೆ.

ಸಂವಿಧಾನ ಪೀಠಿಕೆ ಓದುವ ಮೂಲಕ ಅಂಬೇಡ್ಕರ್‌ ಜಯಂತಿ ಆಚರಣೆ

ಕೂಲಿ ಕಾರ್ಮಿಕರ ಸಂಘಟನೆ ಭಾಗ್ಯಮ್ಮ ಮಾತನಾಡಿ, “ಅಂಬೇಡ್ಕರ್ ನಮ್ಮ ದೇಶದಲ್ಲಿ ಹುಟ್ಟಿರುವುದೇ ನಮ್ಮ ಪುಣ್ಯ. ಅವರು ಪ್ರಪಂಚವೇ ಮೆಚ್ಚುವಂತಹ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಶೋಷಿತ, ದುರ್ಬಲ, ಹಿಂದುಳಿದ ವರ್ಗದ ಜನರಿಗೆ ಮುಳುಗದೆ ಇರುವಂತಹ ಸೂರ್ಯನಾಗಿ ಸದಾ ಬೆಳಕನ್ನು ಚೆಲ್ಲುತ್ತಿದ್ದಾರೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸುಳ್ಳು ಆರೋಪ ಖಂಡಿಸಿ ಸಿಯುಕೆ ವಿದ್ಯಾರ್ಥಿ ಉಪವಾಸ ಸತ್ಯಾಗ್ರಹ

“ಡಾ. ಬಿ.ಆರ್ ಅಂಬೇಡ್ಕರ್ ಅವರು ಮತದಾನ ಹಕ್ಕಿನ ಮೂಲಕ ತಮ್ಮ ಭವಿಷ್ಯದ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರವನ್ನು ಭಾರತ ದೇಶದ ಪ್ರತಿಯೊಬ್ಬ ಪ್ರಜೆಗೂ ಕೊಟ್ಟಿದ್ದಾರೆ. ನಾವು ದುರುಪಯೋಗ ಮಾಡಿಕೊಳ್ಳದೆ ಯಾವುದೇ ಆಸೆ ಆಕಾಂಕ್ಷಿಗಳಿಗೆ ಬಲಿಯಾಗದೆ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನಮ್ಮ ಮುಂದೆ ಬಂದಿದೆ. ಇದರ ಸದುಪಯೋಗ ಪಡೆದುಕೊಂಡು ಉತ್ತಮರನ್ನು ಆಯ್ಕೆ ಮಾಡಿಕೊಳ್ಳೊಣ” ಎಂದು ಸಲಹೆ ನೀಡಿದರು.

“ಪ್ರತಿ ನಿಮಿಷಕ್ಕೂ ಸದಾ ಬೆಳೆಯುತ್ತಿರುವ ವ್ಯಕ್ತಿ ಎಂದರೆ, ಡಾ. ಬಿ ಆರ್ ಅಂಬೇಡ್ಕರ್. ಅವರ ತತ್ವ ಸಿದ್ಧಾಂತಗಳ ಅಡಿಯಲ್ಲಿ ಮುನ್ನಡೆಯೋಣ” ಎಂದು ಮನರೇಗಾ ಕೂಲಿಕಾರ್ಮಿಕರ ಸಂಘದ ಶೃತಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕರು ಯಶೋಧ ಮಾರುತಿ ನೀಲಮ್ಮ ಹೊನ್ನಮ್ಮ ಗಂಗಮ್ಮ, ಜಗದೀಶ, ನಾಗಪ್ಪ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...