ವಿಜಯನಗರ | ಬಸ್ ನಿಲ್ದಾಣದಲ್ಲಿ, ದ್ವಿಚಕ್ರ ವಾಹನಗಳದ್ದೇ ಕಾರುಬಾರು; ಸಾರ್ವಜನಿಕರ ಪರದಾಟ!

Date:

Advertisements

ಜಿಲ್ಲೆಯ ಹರಪನಹಳ್ಳಿ ಸರಕಾರಿ ಸಾರಿಗೆ ಬಸ್ ತಂಗುದಾಣದಲ್ಲಿ ಸಾರ್ವಜನಿಕರು ದ್ವಿಚಕ್ರ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದು, ಈ ಕುರಿತು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತಾಗಿದೆ. ಸಾರಿಗೆ ವಾಹನಗಳ ಓಡಾಟಕ್ಕೆ ಮತ್ತು ಪ್ರಯಾಣಿಕರು ಬಸ್ ಹತ್ತುವಾಗ, ಇಳಿಯುವಾಗ ದ್ವಿಚಕ್ರವಾಹನಗಳು ಅಡ್ಡಗಾಲು ಹಾಕಿರುತ್ತವೆ. ಇದರಿಂದ ಸಾರ್ವಜನಿಕ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದ್ದು, ಇಲ್ಲಿ ದ್ವಿಚಕ್ರ ವಾಹನಗಳದ್ದೇ ಕಾರುಬಾರು ಎನ್ನುಂವತಾಗಿದೆ.

ಈ ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಇದ್ದರೂ ಸಾರ್ವಜನಿಕರು ಅದರ ಸದುಪಯೋಗ ಪಡಿಸಿಕೊಳ್ಳಲು ಹಿಂಜರಿಕೆಯಲ್ಲಿದ್ದಾರೆ. ದ್ವಿಚಕ್ರ ವಾಹನವನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಾರೆ. ಸಾರಿಗೆ ಬಸ್‌ಗಳು ಹಾಗೂ ಪ್ರಯಾಣಿಕರು ಪ್ರಯಾಸಪಡುವಂತಾಗಿದೆ. ಇದರಿಂದ ಮುಕ್ತಿ ಯಾವಾಗ? ಎಂದು ಪರಸ್ಥಳದ ಪ್ರಯಾಣಿಕರು ಪ್ರಶ್ನಿಸುವಂತಾಗಿದೆ. ಸಾರಿಗೆ ವ್ಯವಸ್ಥೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ಸಂಬಂಧಿಸಿದವರ ವಿರುದ್ಧ ಜನರು ಆಕ್ರೋಶಗೊಳ್ಳುತ್ತಿದ್ದಾರೆ.

ಈ ಮೊದಲು ಬಳ್ಳಾರಿ ನಂತರ ದಾವಣಗೆರೆ ಪುನಃ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿದ್ದ ಹರಪನಹಳ್ಳಿ ತಾಲೂಕು ಪ್ರಸ್ತುತ ಹೊಸ ಜಿಲ್ಲೆಯಾದ ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಬರುತ್ತದೆ. ಹರಪನಹಳ್ಳಿ ಪಟ್ಟಣ ಹರಿಹರ ಹಾಗೂ ದಾವಣಗೆರೆಯಿಂದ ಕೇವಲ 40 ಕಿ.ಮೀ ದೂರದಲ್ಲಿದೆ. ಈ ತಾಲೂಕಿನ ಸುತ್ತಲೂ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿವೆ. ಸುಸಜ್ಜಿತವಾದ ರಸ್ತೆಗಳೂ ಇವೆ. ಆದರೆ ಪ್ರಯಾಣಿಕರಿಗೆ ಈ ಬಸ್ ತಂಗುದಾಣದಷ್ಟು ಕಿರಿಕಿರಿಯಾಗುವ ನಿಲ್ದಾಣ ಮತ್ತೊಂದಿಲ್ಲ ಎಂಬುವುದೂ ಸತ್ಯ. ತಂಗುದಾಣದಿಂದ ಬೇರೆಕಡೆಗೆ ವಾಹನಗಳು ಚಲಿಸಲೂ ಅವಕಾಶವಿಲ್ಲದಷ್ಟು ದ್ವಿಚಕ್ರ ವಾಹನಗಳು ಅಡ್ಡವಾಗಿ ಎಲ್ಲೆಂದರಲ್ಲಿ ನಿಲ್ಲುವ ವಾತಾವರಣ ಸೃಷ್ಟಿಯಾಗಿದೆ. ಸಾರಿಗೆ ಸಿಬ್ಬಂದಿ ಕಣ್ಣಿದ್ದು ಕುರುಡರಂತೆ ಇರುತ್ತಾರೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Advertisements
IMG 20250417 WA0006

ಸರಕಾರಿ ಸಾರಿಗೆ ವಾಹನ ಹೊರಡುವಾಗ ಅಡ್ಡ ನಿಲ್ಲುವ ಆಟೋ ಹಾಗೂ ಬೈಕ್‌ಗಳಿಗೆ ಜೋರಾಗಿ ಕರ್ಕಶ ಶಬ್ದ ಮಾಡಿದರೂ ತಿರುಗಿಯೂ ನೋಡದೇ ತಮ್ಮ ವಾಹನದ ಮೇಲೆ ಕುಳಿತು ಹರಟೆ ಹೊಡಿಯುತ್ತಾರೆ. ಇದರಿಂದ ಗ್ರಾಮೀಣ ಪ್ರದೇಶ ಪ್ರಯಾಣಿಕರಿಗೆ ಕಿರಕಿರಿವುಂಟಾಗುತ್ತದೆ. ಆದರೆ, ಯಾರೂ ಧ್ವನಿಯೆತ್ತಿ ದುಸರಾ ಮಾತಾಡುವುದಿಲ್ಲ. ಇಂತಹ ಅವ್ಯವಸ್ಥೆ ಸೃಷ್ಟಿಸುವ ದ್ವಿಚಕ್ರ ವಾಹನ ಮಾಲಿಕರಿಗೆ ದಂಡ ವಿಧಿಸುವ ಕ್ರಮವೂ ಜಾರಿಯಲ್ಲಿದೆ. ಕೆಎಸ್‌ಆರ್‌ಟಿಸಿ ಕೌಂಟರ್‌ಲ್ಲಿ ಇರುವ ಅಧಿಕಾರಿಗಳು ಅಡ್ಡಗೊಡೆಯಂತೆ ನಿಲ್ಲುವ ವಾಹನಗಳ ಮೇಲೆ ನಿಗಾ ಇಡುವುದೂ ದೂರದಮಾತು. ಅಡ್ಡ ನಿಲ್ಲಿಸುವ ಬೈಕ್ ಮಾಲೀಕರನ್ನು ಮಾತಾಡಿಸಲು ಭಯವೇನೋ ಎಂಬಂತೆ ಇರುತ್ತಾರೆ.

ಹೂವಿನಹಡಗಲಿ ಕಡೆಗೆ ಪ್ರಯಾಣಿಸುತ್ತಿದ್ದ ಶೇಖರ್ ನಾಯ್ಕ್ ಈದಿನ.ಕಾಂ ಜೊತೆಗೆ ಮಾತನಾಡಿ, ’ಓಡೋಡಿ ಬಂದು ಬಸ್ ಹತ್ತುವುದಕ್ಕೂ ಜಾಗವಿಲ್ಲದ ವಾತಾವರಣ ಇಲ್ಲಿ ಸೃಷ್ಟಿಯಾಗಿದೆ. ಕೆಎಸ್ಆರ್‌ಟಿಸಿ ಸಿಬ್ಬಂದಿಗಳಾದರೂ ಗಾಡಿ ಇಲ್ಲಿ ನಿಲ್ಲಿಸಬೇಡಿ ಅಂತ ಯಾರಿಗೂ ಹೇಳುವುದಿಲ್ಲ. ಇತ್ತ ಜನರೂ ಹಾಗೆಯೇ ಅವರಿಗೂ ಜವಾಬ್ದಾರಿ ಇಲ್ಲದಂತಾಗಿದೆ. ದಿನವೂ ಇದೇ ಕರ್ಮವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿ ಶಂಕರ ಮಾತನಾಡಿ, “ಬಸ್ ನಿಲ್ದಾಣ ನಗರದ ಮಧ್ಯ ಭಾಗದಲ್ಲಿದ್ದು, ಇಲ್ಲಿಗೆ ಮಾರ್ಕೆಟ್ ಸಮೀಪವಾಗುತ್ತದೆ. ವ್ಯಾಪಾರಕ್ಕೆಂದು ಬಂದವರು ಬಸ್ ನಿಲ್ದಾಣದಲ್ಲೇ ಟು-ವ್ಹಿಲರ್ ನಿಲ್ಲಿಸಿ ಹೋಗುತ್ತಾರೆ. ಇನ್ನು ಕಾಲೇಜು ವಿದ್ಯಾರ್ಥಿಗಳು ಬೈಕ್ ನಿಲ್ಲಿಸಿ ಕುಳಿತಿರುತ್ತಾರೆ. ಅವರಿಗೆ ಹೇಳಿದರೂ ಕಷ್ಟ, ಹೇಳದಿದ್ದರೂ ಕಷ್ಟವೆಂಬ ವಾತವಾರಣದಲ್ಲಿ‌ ನಾವು ಬದುಕುತ್ತಿದ್ದೇವೆ ಇದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಗದಗ | ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ: ಸಚಿವ ಎಚ್ ಕೆ ಪಾಟೀಲ

ಈ ಕುರಿತು ಕೆಎಸ್ಆರ್‌ಟಿಸಿ ಸಿಬ್ಬಂದಿ ಹತ್ತಿರ ವಿಚಾರಿಸಿದಾಗ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು. ಇನ್ನಾದರೂ ಎಲ್ಲೆಂದರಲ್ಲಿ ನಿಲ್ಲುವ ದ್ವಿಚಕ್ರ ವಾಹನಗಳಿಗೆ ಕಡಿವಾಣ ಬೀಳುವುದೇ? ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವವರೇ? ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವರೇ? ಎಂಬುದು ಸಾರ್ವಜನಿಕರ ನಿರೀಕ್ಷೆ ಆಗಿದೆ.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X